Home latest ಮೈಸೂರು-ಧಾರವಾಡ ರೈಲಿನಲ್ಲಿ ಬೆಂಕಿ ಅವಘಡ!

ಮೈಸೂರು-ಧಾರವಾಡ ರೈಲಿನಲ್ಲಿ ಬೆಂಕಿ ಅವಘಡ!

Hindu neighbor gifts plot of land

Hindu neighbour gifts land to Muslim journalist

ಪ್ರತಿನಿತ್ಯ ಸಂಚರಿಸುವ ಮೈಸೂರು- ಧಾರವಾಡ ರೈಲಿನಲ್ಲಿ ನಿನ್ನೆ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರಾತ್ರಿ ಸುಮಾರು 12 ಗಂಟೆಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ.

ಶನಿವಾರ ರಾತ್ರಿ ಮೈಸೂರಿನಿಂದ ಈ ರೈಲು ಹೊರಟಿತ್ತು. ರೈಲಿನ ಮೂರನೇ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಷಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಕ್ಷಣವೇ ರೈಲ್ವೇ ಸಿಬ್ಬಂದಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ‌ ನಂದಿಸುವ ಕಾರ್ಯ ನಡೆಸಿದ್ದಾರೆ. ಇನ್ನೂ ರೈಲಿನಿಂದ ಕೆಳಗೆ ಇಳಿಯುವಾಗ ತಳ್ಳಾಟ ನೂಕಾಟ ನಡೆದಿದ್ದರಿಂದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.

ರೈಲಿನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ ಬಳಿಕ ಮತ್ತೆ ರೈಲು ತನ್ನ ಪ್ರಯಾಣವನ್ನು ಆರಂಭಿಸಿದೆ. ಬೆಂಕಿ ಹತ್ತಿಕೊಂಡ ವಿಷಯ ತಿಳಿಯುತ್ತಲೇ ರೈಲು ನಿಲ್ಲಿಸಲಾಯ್ತು. ಸಂಪೂರ್ಣವಾಗಿ ಬೆಂಕಿ ನಂದಿಸಿದ ಬಳಿಕವೇ ರೈಲು ಹೊರಟಿತು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ರೈಲಿನಲ್ಲಿ ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.  ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲ ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ.