ಉತ್ತರಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ಶುಕ್ರವಾರ ಬಿರುಗಾಳಿ ಪ್ರಾರಂಭವಾಗಿದ್ದು, ಬೆಟ್ವಾ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಒಂದು ಭಾಗ ಕುಸಿದು ಕನಿಷ್ಠ ಐದು ಜನರು ಸಾವಿಗೀಡಾಗಿದ್ದು, ಹಲವು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಸೇತುವೆ ನಿರ್ಮಾಣ ಕಾರ್ಯದ ಸಮಯದಲ್ಲಿ ಗಾಳಿ ರಭಸವಾಗಿ ಬೀಸಿದ್ದು, ಪರಿಣಾಮ ಸೇತುವೆಯ ಸ್ಲ್ಯಾಬ್ ಮತ್ತು ಪಿಯರ್, ಸ್ಕ್ಯಾಫೋಲ್ಡಿಂಗ್ ರಚನೆಯೊಂದಿಗೆ ಕುಸಿದು ಬಿದ್ದಿದೆ. ಕುರಾರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದಲ್ಲಿರುವ ಕಂದೌರ್-ಮೊರಕಂದರ್ ಸೇತುವೆಯಲ್ಲಿ ಈ ಘಟನೆ ನಡೆದಿದೆ.
