Home » ವಿಧಾನಪರಿಷತ್ ಮಾಜಿ ಸದಸ್ಯನನ್ನು ಕಿಡ್ನಾಪ್ ಮಾಡಿ 3 ಕೋಟಿ ಡಿಮ್ಯಾಂಡ್ – ನಾಲ್ವರು ಆರೋಪಿಗಳು ಅರೆಸ್ಟ್

ವಿಧಾನಪರಿಷತ್ ಮಾಜಿ ಸದಸ್ಯನನ್ನು ಕಿಡ್ನಾಪ್ ಮಾಡಿ 3 ಕೋಟಿ ಡಿಮ್ಯಾಂಡ್ – ನಾಲ್ವರು ಆರೋಪಿಗಳು ಅರೆಸ್ಟ್

0 comments

ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಇದೀಗ ಈ ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟ ನಾಲ್ವರನ್ನು ಬಂಧಿಸಿದ್ದಾರೆ. 

ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಬಂಧಿತ ಆರೋಪಿಗಳು. ಅಪಹರಣ ಪ್ರಕರಣ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸೂರ್ಯನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.ಪೊಲೀಸರು ನಾಲ್ವರನ್ನು ಆರೋಪಿಗಳನ್ನು ಬಂಧಿಸಿ, ಕಿಡ್ನಾಪ್‌ಗೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಪೊಲೀಸರು ನಾಲ್ವರನ್ನು ಆರೋಪಿಗಳನ್ನು ಬಂಧಿಸಿ, ಕಿಡ್ನಾಪ್‌ಗೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಯಾನಂದ ರೆಡ್ಡಿ ಅವರು ಗೋಲ್ಡ್ ಕಾಯಿನ್ ಕ್ಲಬ್​ನಿಂದ ಹೊರಟಿದ್ದರು. ಈ ವೇಳೆ ಬೈಕ್​ನಲ್ಲಿ ಬಂದು ದಯಾನಂದ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ನಿಮಗೆ ಗಿಫ್ಟ್ ಬಂದಿದೆ ಎಂದು ಕಾಟನ್ ಬಾಕ್ಸ್ ತೋರಿಸಿದ್ದಾರೆ. ಡೋರ್​ ಲಾಕ್ ಓಪನ್ ಮಾಡುತ್ತಿದ್ದಂತೆ ಕಾರಿಗೆ ನುಗ್ಗಿರುವ ಓರ್ವ ಗನ್ ತೋರಿಸಿ ತಾನು ಹೇಳಿದ ಕಡೆ ಕಾರು ಚಲಾಯಿಸಲು ಸೂಚನೆ ನೀಡಿದ್ದ. ಬಳಿಕ ಕೆಂಪು ಬಣ್ಣದ ಕಾರಿನಲ್ಲಿ ಮತ್ತಿಬ್ಬರು ಇವರನ್ನು ಹಿಂಬಾಲಿಸಿದ್ದರು. ಅತ್ತಿಬೆಲೆಯ ಕೆಹೆಚ್​ಬಿ ಬಡಾವಣೆ ಬಳಿ ಮಾಜಿ ಎಂಎಲ್ ಸಿಯನ್ನು ಕರೆದೊಯ್ದು ಕೊಲೆ ಬೆದರಿಕೆ ಹಾಕಲಾಗಿದ್ದು, ನಿನ್ನ ಹತ್ಯೆಗೆ 10 ಕೋಟಿ ಸುಪಾರಿ ಕೊಟ್ಟಿದ್ದಾರೆ ಎಂದು ದಯಾನಂದರೆಡ್ಡಿ ಕುತ್ತಿಗೆಗೆ ಗನ್ ಇಟ್ಟು ದುಷ್ಕರ್ಮಿಗಳು ಹೆದರಿಸಿದ್ದರು. 

ಈ ವೇಳೆ ಹಣ ನಾನೇ ಕೊಡುತ್ತೇನೆ, ಕೊಲ್ಲಬೇಡಿ ಎಂದು ದಯಾನಂದ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ. ಮೊದಲು 3 ಕೋಟಿ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರು, ಬಳಿಕ 2 ಕೋಟಿ ರೂ.ಗೆ ಒಪ್ಪಿಕೊಂಡಿದ್ದಾರೆ. ಆದರೆ ಸದ್ಯ ಹಣ ಇಲ್ಲ, ಬೆಳಗ್ಗೆ ಬ್ಯಾಂಕ್ ಗೆ ತೆರೆದ ಬಳಿಕ ಹಣ ನೀಡುವುದಾಗಿ ದಯಾನಂದ ರೆಡ್ಡಿ ಮನವಿ ಹೇಳಿದ್ದಾರೆ. ಹಣ ಡ್ರಾ ಮಾಡಿದ ಬಳಿಕ ಕರೆ ಮಾಡುವಂತೆ ಸೂಚಿಸಿ ಆರೋಪಿಗಳು ಅವರನ್ನು ಬಿಟ್ಟು ಕಳುಹಿಸಿದ್ದಾರೆ.ಈ ಸಂಬಂಧ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

banner

ತನಿಖೆ ನಡೆಸಿದ ಪೊಲೀಸರಿಗೆ ಕಿಡ್ನಾಪ್ ಮಾಡಿ ಕರೆದೊಯ್ಯುತ್ತಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಸದ್ಯ ಪೊಲೀಸರು ನಾಲ್ವರನ್ನು ಆರೋಪಿಗಳನ್ನು ಬಂಧಿಸಿ, ಕಿಡ್ನಾಪ್‌ಗೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಗಳ ವಿಚಾರಣೆ ನಡೆಯುತ್ತಿದೆ.

You may also like