Home News Darshan: ಇನ್ಮುಂದೆ ಊಟಕ್ಕೆ ಸರತಿ ಸಾಲಿನಲ್ಲಿ ನಿಲ್ಲಬೇಕು: ದರ್ಶನ್ ಗೆ ಜೈಲು ಶಿಕ್ಷೆ ಮತ್ತಷ್ಟು ಕಠಿಣ

Darshan: ಇನ್ಮುಂದೆ ಊಟಕ್ಕೆ ಸರತಿ ಸಾಲಿನಲ್ಲಿ ನಿಲ್ಲಬೇಕು: ದರ್ಶನ್ ಗೆ ಜೈಲು ಶಿಕ್ಷೆ ಮತ್ತಷ್ಟು ಕಠಿಣ

Hindu neighbor gifts plot of land

Hindu neighbour gifts land to Muslim journalist

Darshan: ದರ್ಶನ್‌ಗೆ (Darshan) ಬ್ಯಾರಕ್ ಅಲ್ಲಿ ಕೂರಿಸಿ ಊಟ ಕೊಡುತ್ತಿದ್ದ ಜೈಲಾಧಿಕಾರಿಗಳು (Jailer) ಈಗ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ.

ಹೌದು, ಜೈಲು ಸೂಪರಿಂಟೆಂಡೆಂಟ್ ಆಗಿ ಇದೇ ಮೊದಲ ಬಾರಿಗೆ ಐಪಿಎಸ್ ಅಧಿಕಾರಿ ನೇಮಕಾತಿ ಆಗಿರೋ ಅಂಶುಕುಮಾರ್ ಮತ್ತಷ್ಟು ಹೊಸ ರೂಲ್ಸ್ ತಂದಿದ್ದಾರೆ. ಇಷ್ಟು ದಿನ ಬ್ಯಾರಕ್ ಅಲ್ಲಿ ಊಟ ಪಡೆದು ಊಟ ಮಾಡುತ್ತಾ ಇದ್ದ ದರ್ಶನ್ ಈಗ ಎಲ್ಲಾ ಆರೋಪಿಗಳಂತೆ ಸರತಿ ಸಾಲಿನಲ್ಲಿಯೇ ನಿಂತು ಊಟ ಪಡೆಯುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಜೈಲಿನ ಕಳ್ಳಾಟಕ್ಕೆ ಸಂಪೂರ್ಣ ಬ್ರೇಕ್ ಹಾಕಲೇಬೇಕೆಂದು ತೀರ್ಮಾನ ಮಾಡಿ ಈಗ ಎಲ್ಲರಿಗೂ ಒಂದೇ ರೂಲ್ಸ್ ಮಾಡಿದ್ದಾರೆ. ಸದ್ಯ ದರ್ಶನ್ ಬ್ಯಾರಕ್ ಇಂದ ಹೊರಗೆ ಬಂದು ಊಟ ಪಡೆಯಬೇಕು ಬಳಿಕ ಊಟ ಮುಗಿಸಿಯೇ ಬ್ಯಾರಕ್‌ಗೆ ತೆರಳಬೇಕಿದೆ. ಇನ್ನು ಭದ್ರತಾ ದೃಷ್ಟಿಯಿಂದ ಇಷ್ಟು ದಿನ ಸಿಕ್ಕಿದ್ದ ವಾಕಿಂಗ್ ಅವಕಾಶವನ್ನೂ ಕಡಿತಗೊಳಿಸಿದ್ದಾರೆ. ಬಟ್ಟೆ ತೊಳೆದು ಒಣ ಹಾಕೋಕೆ ಮಾತ್ರ ಸ್ವಲ್ಪ ಕಾಲಾವಕಾಶ ನೀಡಿದ್ದು, ಮತ್ಯಾವುದಕ್ಕೂ ಅವಕಾಶ ಇಲ್ಲದೇ ದರ್ಶನ್ ಪರದಾಡುವಂತೆ ಆಗಿದೆ.