Home News ಗಡಿಪಿಲ : ರಿಕ್ಷಾ ಚಾಲಕ ಚೇತನ್‌ಗೆ ಹಲ್ಲೆ ,ಹ್ಯಾರಿಸ್ ಮತ್ತು ತಂಡದಿಂದ ಕೃತ್ಯ ಶಂಕೆ

ಗಡಿಪಿಲ : ರಿಕ್ಷಾ ಚಾಲಕ ಚೇತನ್‌ಗೆ ಹಲ್ಲೆ ,ಹ್ಯಾರಿಸ್ ಮತ್ತು ತಂಡದಿಂದ ಕೃತ್ಯ ಶಂಕೆ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಗಡಿಪಿಲ ರೈಲ್ವೇ ಗೇಟ್ ಬಳಿ ತಂಡವೊಂದು ಆಟೋ ರಿಕ್ಷಾ ಚಾಲಕರೊಬ್ಬರಿಗೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಅ.19 ರಂದು ತಡ ರಾತ್ರಿ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ.

ನರಿಮೊಗರು ಗ್ರಾಮದ ವೀರಮಂಗಲ ನಿವಾಸಿ ರಿಕ್ಷಾ ಚಾಲಕ

ಚೇತನ್ ಯಾನೆ ಲಕ್ಷ್ಮಣ್ ಎಂಬವರು ಹಲ್ಲೆಗೊಳಗಾದವರು.ಚೇತನ್ ಯಾನೆ ಲಕ್ಷ್ಮಣ್ ಅವರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ರಾತ್ರಿ ವೇಳೆ ತನ್ನ ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದಾಗ ಗಡಿಪಿಲ ರೈಲ್ವೆ ಗೇಟ್ ಬಳಿ ಆಕ್ಟಿವಾ ಮತ್ತು ಬೈಕ್‌ನಲ್ಲಿ ಬಂದ ತಂಡ ರಿಕ್ಷಾವನ್ನು ನಿಲ್ಲಿಸಿ ಚಾಲಕ ಲಕ್ಷ್ಮಣ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ಹಲ್ಲೆ ನಡೆಸಿದವರ ಪೈಕಿ ಓರ್ವ ಹ್ಯಾರೀಸ್ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.