ಕಡಪಾ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಪುಣೆಯಿಂದ ತೆರಳುತ್ತಿದ್ದ ತುಪ್ಪದ ಟ್ಯಾಂಕ್ ಆಂಧ್ರಪ್ರದೇಶದ ವೈಎಸ್ಆರ್ ಕಡಪಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಈ ಸಂದರ್ಭದಲ್ಲಿ ರಸ್ತೆಗೆ ಬಿದ್ದ ತುಪ್ಪವನ್ನು ಸ್ಥಳೀಯರು ಬಕೆಟ್ ಪಾತ್ರೆಗಳಲ್ಲಿ ಬಾಚಿ ಬಾಚಿ ತಗೊಂಡು ಹೋಗಿರುವ ಘಟನೆ ನಡೆದಿದೆ.

ಚಿತ್ರಾನದಿ ವೇಳೆ ಸೇತುವೆ ದಾಟುವ ಸಂದರ್ಭ ಟ್ಯಾಂಕರ್ ಪಲ್ಟಿಯಾಗಿದೆ. ಚಾಲಕ ಮತ್ತು ಕ್ಲೀನರ್ಗೆ ಸಣ್ಣಪುಟ್ಟ ಗಾಯವಾಗಿದೆ. ಪೊಲೀಸರು ಬರುವ ಮೊದಲೇ ಸ್ಥಳೀಯರು ಟ್ಯಾಂಕರ್ನಲ್ಲಿದ್ದ ತುಪ್ಪವನ್ನು ಬಕೆಟ್, ಪಾತ್ರೆಗಳಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ. ನಂತರ ಪೊಲೀಸರು ಸ್ಥಳದಲ್ಲಿದ್ದ ಜನರನ್ನು ಚದುರಿಸಿದ್ದಾರೆ.
