Home Interesting ಪ್ರೀತಿಯ ಬಲೆಗೆ ಬಿದ್ದು ಆಕೆಯೊಂದಿಗೆ ಲಾಡ್ಜ್ ಗೆ ತೆರಳಿದ ಯುವಕ ; ಬಳಿಕ ಆಗಿದ್ದು ರೋಚಕ!

ಪ್ರೀತಿಯ ಬಲೆಗೆ ಬಿದ್ದು ಆಕೆಯೊಂದಿಗೆ ಲಾಡ್ಜ್ ಗೆ ತೆರಳಿದ ಯುವಕ ; ಬಳಿಕ ಆಗಿದ್ದು ರೋಚಕ!

Hindu neighbor gifts plot of land

Hindu neighbour gifts land to Muslim journalist

ಸಾಮಾಜಿಕ ಜಾಲವೆಂಬುದು ಅದೆಷ್ಟೇ ದೂರದಲ್ಲಿದ್ದ ವ್ಯಕ್ತಿಯನ್ನು ಕ್ಷಣಾರ್ಧದಲ್ಲಿ ಒಂದು ಮಾಡುತ್ತದೆ. ಇದನ್ನೇ ಬಂಡವಾಳವಾಗಿಸಿಕೊಂಡು ಅದೆಷ್ಟೋ ಜನ ಹಣ ವಸೂಲಿಗೆ ಇಳಿಯುತ್ತಿದ್ದಾರೆ. ಇದರ ಮೂಲಕ ಪರಿಚಯ ಮಾಡಿಕೊಂಡು ಬಳಿಕ ದಂಧೆಗೆ ಇಳಿಯುತ್ತಾರೆ. ಅಂತಹುದೇ ಒಂದು ಘಟನೆ ಕೇರಳದಲ್ಲಿ ನಡೆದಿದ್ದು, ಸೋಶಿಯಲ್ ಮೀಡಿಯಾ ಮೂಲಕ ಪರಿಚಯವಾಗಿ ಭೇಟಿ ಮಾಡುವವರಿಗೆ ಈ ಘಟನೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.

ಕೇರಳ ಮೂಲದ ಮಹಿಳೆಯೊಬ್ಬಳು ಪ್ರೀತಿಯ ನಾಟಕವಾಡಿ, ಕೊಟ್ಟಾಯಂನ ವೈಕ್ಕೊಮ್ ನಿವಾಸದ ಯುವಕನೊಬ್ಬನನ್ನು ಲಾಡ್ಜ್‌ಗೆ ಕರೆಸಿಕೊಂಡಿದ್ದಾಳೆ. ಬಳಿಕ ಮಾಡಿದ್ದು ಮಾತ್ರ ಊಹಿಸಲಾಗದ ಕೆಲಸ. ಹೌದು. ತನ್ನ ಮೂವರು ಫ್ರೆಂಡ್ಸ್ ಜೊತೆ ಸೇರಿ, ಯುವಕನ ಮೇಲೆಯೇ ದಂಧೆ ಮಾಡಿದ್ದಾಳೆ. ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಎಂಬುದರ ಸಂಪೂರ್ಣ ವಿವರ ಇಲ್ಲಿದೆ ನೋಡಿ..

ಸಂತ್ರಸ್ತ ಯುವಕನಿಗೆ ಆರೋಪಿ ಮಹಿಳೆ ಸಾಮಾಜಿಕ ಜಾಲತಾಣ ಮೂಲಕ ಪರಿಚಯವಾಗಿದ್ದಳು. ಇಬ್ಬರು ನಿರಂತರವಾಗಿ ಮಾತನಾಡುತ್ತಾ ತುಂಬಾ ಹತ್ತಿರವಾಗಿದ್ದರು. ಇದೇ ಸಲುಗೆಯಲ್ಲಿ ಮಹಿಳೆಯು, ಯುವಕನನ್ನು ಎರ್ನಾಕುಲಂ ಜನರಲ್ ಹಾಸ್ಪಿಟಲ್ ಬಳಿಯಿರುವ ಲಾಡ್ಜ್‌ಗೆ ಆಗಸ್ಟ್ 8ರಂದು ಕರೆದಿದ್ದಳು.

ಆಕೆಯ ಮಾತು ನಂಬಿ ಯುವಕ ಅಂದು ಲಾಡ್ಜ್‌ನ ರೂಮ್ ನಂಬರ್ 205ಕ್ಕೆ ತೆರಳಿದ್ದ. ಕೊಠಡಿಯ ಒಳಗೆ ಹೋಗುತ್ತಿದ್ದಂತೆ ಮಹಿಳೆಯ ಮೂವರು ಫ್ರೆಂಡ್ ಯುವಕನನ್ನು ಹಿಡಿದುಕೊಂಡು ಕುರ್ಚಿಗೆ ಕಟ್ಟಿಹಾಕಿದ್ದಾರೆ. ಬಾಯಿಗೆ ಬಟ್ಟೆ ತುರುಕಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಯುವಕನ ಕತ್ತಿನಲ್ಲಿದ್ದ ಚಿನ್ನದ ಸರ, ಬ್ರೇಸ್‌ಲೆಟ್, ರಿಂಗ್ ಮತ್ತು 20 ಸಾವಿರ ರೂ. ಬೆಲೆ ಬಾಳುವ ಮೊಬೈಲ್ ಫೋನ್ ಮತ್ತು ಪಾಕೆಟ್‌ನಲ್ಲಿದ್ದ 5 ಸಾವಿರ ರೂ. ನಗದು ದೋಚಿದ್ದಾರೆ. ಇಷ್ಟೇ ಅಲ್ಲದೆ, ಆತನ ಫೋನ್ ಬಳಸಿಕೊಂಡು ಬಲವಂತವಾಗಿ ಆತನ ಬ್ಯಾಂಕ್ ಖಾತೆಯಿಂದ 15 ಸಾವಿರ ರೂಪಾಯಿ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಹಲ್ಲೆಯಿಂದಾಗಿ ಯುವಕನ ಮೈಮೇಲೆ ತುಂಬ ಗಾಯಗಳಾಗಿದ್ದು, ಚಿಕಿತ್ಸೆ ಪಡೆದುಕೊಂಡ, ಬಳಿಕ ಆಗಸ್ಟ್ 13 ರಂದು ಹನಿಟ್ರ್ಯಾಪ್‌ನ ಸಂತ್ರಸ್ತ ಎರ್ನಾಕುಲಂ ಕೇಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ಲಾಡ್ಜ್‌ನಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿ, ತನಿಖೆ ಆರಂಭಿಸಿದ್ದಾರೆ.