Home » ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಗೆ ತಲಾ ಒಂದು ಕೋಟಿ ಪರಿಹಾರ ನೀಡಿ- ಕಾಕ್ರೋಚ್‌ ಪಾರ್ಟಿಯಿಂದ ಮೋದಿಗೆ ಪತ್ರ

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಗೆ ತಲಾ ಒಂದು ಕೋಟಿ ಪರಿಹಾರ ನೀಡಿ- ಕಾಕ್ರೋಚ್‌ ಪಾರ್ಟಿಯಿಂದ ಮೋದಿಗೆ ಪತ್ರ

0 comments

ನೀಟ್‌ ಪರೀಕ್ಷೆಗೆ ಕುರಿತಂತೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಒಂದು ಕೋಟಿ ರೂ. ಪರಿಹಾರ ನೀಡುವಂತೆ ಪ್ರಧಾನಿ ಮೋದಿಗೆ ಕಾಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್‌ ದೀಪ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಪ್ರಶ್ನೆ ಪತ್ರಿಕೆ ಹೊಣೆಗಾರಿಕೆ ವಹಿಸುವಂತೆ ಒತ್ತಾಯಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ವಜಾ ಮಾಡುವ ತಮ್ಮ ಬೇಡಿಕೆಯನ್ನು ಪುನರುಚ್ಚಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಇತ್ತೀಚಿನ ವಾರಗಳಲ್ಲಿ 11 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 48 ಗಂಟೆಗಳಲ್ಲಿ ಐದು ಸಾವುಗಳು ಸಂಭವಿಸಿವೆ. ಅನೇಕ ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಕನಸುಗಳನ್ನು ನನಸಾಗಿಸಲು ಶೈಕ್ಷಣಿಕ ಸಾಲ ಪಡೆದಿದ್ದಾರೆ. ತಮ್ಮ ಇಡೀ ಜೀವನದ ಉಳಿತಾಯವನ್ನು ಖರ್ಚು ಮಾಡಿ ಮಕ್ಕಳನ್ನು ಕಳೆದುಕೊಂಡು ಈ ಕುಟುಂಬಗಳು ಸಂಪೂರ್ಣವಾಗಿ ನಿರ್ಗತಿಕರಾಗಿದ್ದಾರೆ. ಆದ್ದರಿಂದ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

You may also like