HomeKarnataka State Politics Updatesರಾಜ್ಯದ ರೈತರಿಗೆ ಗುಡ್ ನ್ಯೂಸ್ | ನಿರಂತರ 7 ಗಂಟೆ ವಿದ್ಯುತ್ ಪೂರೈಕೆ

ರಾಜ್ಯದ ರೈತರಿಗೆ ಗುಡ್ ನ್ಯೂಸ್ | ನಿರಂತರ 7 ಗಂಟೆ ವಿದ್ಯುತ್ ಪೂರೈಕೆ

Hindu neighbor gifts plot of land

Hindu neighbour gifts land to Muslim journalist

ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದರು.

ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಚಿವ ಸುನೀಲ್ ಕುಮಾರ್ ಸುದ್ದಿಗಾರರ ಜೊತೆ ಮಾತನಾಡುತ್ತಾ, ರಾಜ್ಯದಲ್ಲಿ ರೈತರಿಗೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ, ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಮತ್ತೆ ಹೊಸದಾಗಿ ಐಪಿ ಸೆಕ್ಟರ್‌ಗಳಿಗೆ ವಿದ್ಯುತ್ ಸಂಪರ್ಕ ನೀಡುವುದರ ಕುರಿತು ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಣೆ ಮಾಡಬೇಕು. ಹಾಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡಲಾಗುತ್ತಿದೆ, ರಾಜ್ಯದಲ್ಲಿ ವಿದ್ಯುತ್ ದರ ಬಗ್ಗೆ ಒಂದು ಸಲ ಹೆಚ್ಚಾದ್ದಾರೆ ಮತ್ತೊಮ್ಮೆ ದರ ಕಡಿಮೆಯಾಗಲಿದೆ. ನಮ್ಮ ಸರ್ಕಾರ ಬಂದ ಮೇಲೆ ಅಥವಾ ನಾನು ಸಚಿವನಾದ ಮೇಲೆ ದರ ಪರಿಷ್ಕರಣೆ ನೀತಿ ಜಾರಿಗೆ ಬಂದಿಲ್ಲ. ಕಳೆದ 7 ವರ್ಷಗಳಿಂದ ಈ ಇಂತಹ ಪರಿಷ್ಕರಣೆ ನಡೆಯುತ್ತಿದೆ ಎಂದು ಹೇಳಿದರು.
ರೈತರಿಗೆ 7 ಗಂಟೆ ವಿದ್ಯುತ್‌ ನೀಡುವುದು ನಿಶ್ಚಿತ. ಬಿಜೆಪಿ ಅವಧಿಯಲ್ಲಿ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

2 COMMENTS

Most Popular

Recent Comments