Home News Assembly : ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ – ಎಲೆ ಚುಕ್ಕೆ, ಹಳದಿ...

Assembly : ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ – ಎಲೆ ಚುಕ್ಕೆ, ಹಳದಿ ಎಲೆ ರೋಗ ತೊಂದರೆಗೆ ಒಳಗಾದ ರೈತರಿಗೆ ಶೀಘ್ರದಲ್ಲಿ ಪರಿಹಾರ ಬಿಡುಗಡೆ

Hindu neighbor gifts plot of land

Hindu neighbour gifts land to Muslim journalist

Assembly: ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ಒಂದನು ನೀಡಿದ್ದು ಎಲೆ ಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು 2023-24ನೇ ಸಾಲಿನಲ್ಲಿ ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ. 4000/- ಗಳಂತೆ 1.5 ಹೆಕ್ಟೇರ್ ವರೆಗೆ ಪ್ರತಿ ಫಲಾನುಭವಿಗೆ ಗರಿಷ್ಠ ರೂ. 6000/- ಮೊತ್ತದ ಸಸ್ಯ ಸಂರಕ್ಷಣಾ ಔಷಧಿಗಳನ್ನು 6,250 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಿ ರೂ. 2.50 ಕೋಟಿ ಅನುದಾನವನ್ನು 12,300 ಅಡಿಕೆ ಬೆಳೆಗಾರರಿಗೆ ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಅಲ್ಲದೆ ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಳೆಯ ಕಟಾವು ಹಾಗೂ (ದೋಟಿ) ಖರೀದಿಸಲು ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇಕಡಾ 40 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇಕಡಾ 50 ರಂತೆ ಸಹಾಯಧನ ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ 1,201 ಫಲಾನುಭವಿಗಳಿಗೆ ರೂ.3.66 ಕೋಟಿ ಸಹಾಯಧನ ನೀಡಲಾಗಿದೆ. ಅಡಿಕೆ ಎಲೆ ಚುಕ್ಕೆ ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಹಯೋಗದೊಂದಿಗೆ ತರಬೇತಿ ಕಾರ್ಯಗಾರಗಳು ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವುದರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು.