Home Interesting Big News | ಗೋಮೂತ್ರವನ್ನು ಲೀಟರ್‌ ಗೆ 4 ರೂ.ಗೆ ಖರೀದಿಗೆ ಮುಂದಾದ ಸರ್ಕಾರ, ಹಾಲಿಗಿಂತ...

Big News | ಗೋಮೂತ್ರವನ್ನು ಲೀಟರ್‌ ಗೆ 4 ರೂ.ಗೆ ಖರೀದಿಗೆ ಮುಂದಾದ ಸರ್ಕಾರ, ಹಾಲಿಗಿಂತ ಗೋಮೂತ್ರದಿಂದಲೇ ಜಾಸ್ತಿ ಗಳಿಸಲಿದ್ದಾರೆ ರೈತರು !!

Hindu neighbor gifts plot of land

Hindu neighbour gifts land to Muslim journalist

ರೈತರು ಹೆಚ್ಚಿನ ಆದಾಯ ಗಳಿಸುವಂತೆ ಮಾಡಿ ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗೋಮೂತ್ರವನ್ನು ಖರೀದಿಸಲು ಈ ಸರ್ಕಾರ ಯೋಜನೆ ರೂಪಿಸಿದೆ. ಇನ್ನು ಮುಂದೆ ಹಾಲಿಗಿಂತ ಗೋಮೂತ್ರ ಮಾರಿ ಹೆಚ್ಚು ದುಡ್ಡು ಸಂಪಾದಿಸಲಿದ್ದಾರೆ ರೈತಾಪಿ ವರ್ಗ.

ಪ್ರತಿ ಲೀಟರ್‌ಗೆ 4 ರೂ. ದರದಲ್ಲಿ ಗೋಮೂತ್ರ ಖರೀದಿಸಲು ಸರ್ಕಾರ ಮುಂದಾಗಿದೆ. ರಾಜ್ಯಾದ್ಯಂತ ಸುಸ್ಥಿರ ಗೋಸಂರಕ್ಷಣೆ ಉತ್ತೇಜಿಸಲು ಈ ಯೋಜನೆ ರೂಪಿಸಲಾಗಿದೆ ಎಂದು ಛತ್ತೀಸಗಡದ ಕಾಂಗ್ರೆಸ್‌ ಸರ್ಕಾರ ತಿಳಿಸಿದೆ.

ʼಗೋದಾನ ನ್ಯಾಯ ಯೋಜನೆʼ ಅಂಗವಾಗಿ, ಜುಲೈ 28 ರಂದು ನಡೆಯಲಿರುವ ‘ಹರೇಲಿ ತಿಹಾರ್’ ಹಬ್ಬದ ಸಂದರ್ಭದಲ್ಲಿ ಈ ಯೋಜನೆಯನ್ನು ಪ್ರಾರಂಭಿಸಲಾಗುವುದು. ನಮ್ಮ ಸರ್ಕಾರವು ಗೋದಾನ್‌ ನ್ಯಾಯ ಯೋಜನೆಯಡಿ ಗೋಮೂತ್ರ ಖರೀದಿ ಪ್ರಕ್ರಿಯೆಯನ್ನು ಮೊದಲ ಬಾರಿಗೆ ಆರಂಭಿಸಿದೆ ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ನೇತೃತ್ವದ ಸರ್ಕಾರ ಹೇಳಿದೆ. ಗೋದಾನ್ ನ್ಯಾಯ ಮಿಷನ್ ನಿರ್ದೇಶಕ ಅಯ್ಯಾಜ್ ತಾಂಬೋಳಿ ಅವರು, ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿರುವ ಗೋಶಾಲೆಗಳು ಗೋಮೂತ್ರ ಖರೀದಿಸಲಿವೆ. ಆಯಾ ಜಿಲ್ಲೆಯ ರೈತರು ಸಂಗ್ರಹಿಸಿ ಗೋಮೂತ್ರವನ್ನು ಈ ಗೋಠಾಣೆಗಳಿಗೆ ತಂದು ನೀಡಬೇಕು. ಕೃಷಿ ಅಭಿವೃದ್ಧಿ ಮತ್ತು ರೈತರ ಕಲ್ಯಾಣ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಗಳಿಂದ ಗೋಮೂತ್ರ ಖರೀದಿಗೆ ಕನಿಷ್ಠ ಬೆಲೆ ಲೀಟರ್‌ಗೆ 4 ರೂ.ಗೆ ಪ್ರಸ್ತಾವಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಗೆ ಜನರಿಂದ ಸಂಗ್ರಹಿಸಿದ ಗೋಮೂತ್ರವನ್ನು ಸ್ವ-ಸಹಾಯ ಮಹಿಳಾ ಗುಂಪುಗಳ ಸಹಾಯದಿಂದ ಕೀಟ ನಿಯಂತ್ರಣ ಉತ್ಪನ್ನಗಳು ಮತ್ತು ನೈಸರ್ಗಿಕ ದ್ರವ ಗೊಬ್ಬರವನ್ನು ತಯಾರಿಸಲು ಬಳಸಲಾಗುತ್ತದೆ. ಇದರಿಂದ ಬೇಸಾಯದಲ್ಲಿ ರಸಗೊಬ್ಬರದ ವೆಚ್ಚ ಮತ್ತು ಹೊಲಗಳಲ್ಲಿ ದ್ರವ ಗೊಬ್ಬರಗಳ ಬಳಕೆ ಕಡಿಮೆಯಾಗುತ್ತದೆ.