Home News ಹಳ್ಳ ದಾಟುವಾಗ ನಡೆದ ದುರಂತ | ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ಸಾವು

ಹಳ್ಳ ದಾಟುವಾಗ ನಡೆದ ದುರಂತ | ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ಸಾವು

Hindu neighbor gifts plot of land

Hindu neighbour gifts land to Muslim journalist

ಹಳ್ಳ ದಾಟುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ.

ವಿ.ಮಡುಗುಲಾ ಮಂಡಲ್ ಜಮ್ಮದೇವಿಪೇಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಮಕ್ಕಳನ್ನು ಜಾಹ್ನವಿಯುಟ್ಯೂಬ್ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್ (7) ಎಂದು ಗುರುತಿಸಲಾಗಿದೆ.

ಮಧ್ಯಾಹ್ನದ ಹೊತ್ತಿಗೆ ಮಕ್ಕಳ ಪಾಲಕರು ಬಟ್ಟೆ ಒಗೆಯಲು ಹೋಗಿದ್ದರು. ಮಕ್ಕಳು ಕೂಡ ಜತೆಯಲ್ಲಿ ತೆರಳಿದ್ದರು. ಈ ವೇಳೆ ನೀರಿನ ಹಳ್ಳವನ್ನು ದಾಟುವಾಗ ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಮುಳುಗಿದ್ದಾರೆ. ಪಾಲಕರು ಸ್ಥಳೀಯರನ್ನು ಕೂಗಿ ಕರೆದಿದ್ದು, ತಕ್ಷಣ ಸ್ಥಳೀಯರು ನೀರಿಗೆ ಧುಮುಕಿ 4 ಮಕ್ಕಳನ್ನು ಹೊರತಂದಿದ್ದಾರೆ. ಆದರೆ ಅದಾಗಲೇ ಮಕ್ಕಳು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಯಾವುದೇ ಪ್ರಕರಣ ದಾಖಲಾದ ಬಗ್ಗೆ ತಿಳಿದುಬಂದಿಲ್ಲ.