ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5 ರವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂನ್ 1 ರಿಂದ 4 ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಜೂ 2 ರಿಂದ ಜೂ 4 ರವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಜೂ 5 ರಂದು ಜಿಲ್ಲೆಯ ಬಹುತೇತಕ ಭಾಗದಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ.
ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಹಾಗೂ ಮಲೆನಾಡು ಭಾಗದ ದಾಂಡೇಲಿ ಭಾಗದಲ್ಲಿ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಮಾಡಿದ್ದಾರೆ.
ಜೂ.1 ರಿಂದ ಜಾರಿಗೆ ಬರುವಂತೆ ಮಳೆ ಮುಗಿಯುವ ತನಕ ಈ ಆದೇಶ ಇರಲಿದ್ದು, ಪ್ರವಾಸಿಗರಿಗೆ ಕಡಲ ತೀರಗಳಿಗೂ ಕೂಡಾ ನಿರ್ಬಂಧ ಇರಲಿದೆ.

