Home latest Karnataka Rain : ಮತ್ತೆ ಮಳೆರಾಯನ ಅಬ್ಬರ ಶುರು | ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ...

Karnataka Rain : ಮತ್ತೆ ಮಳೆರಾಯನ ಅಬ್ಬರ ಶುರು | ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ವರುಣಾರ್ಭಟ – ಹವಾಮಾನ ಇಲಾಖೆ

Hindu neighbor gifts plot of land

Hindu neighbour gifts land to Muslim journalist

ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ (Rain in Karnataka) ಕಡಿಮೆಯಾಗಿತ್ತು. ಆದರೆ ಇಂದಿನಿಂದ (ನ.2) ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆರಾಯ ಮತ್ತೆ ಮೈಕೊಡವಿಗೊಂಡು ಧಾರಾಕಾರವಾಗಿ ಸುರಿಯಲು ರೆಡಿಯಾಗಿದ್ದಾನೆ. ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ (Monsoon) ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ಇಂದಿನಿಂದ ನವೆಂಬರ್ 4ರವರೆಗೆ ಕರಾವಳಿ, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.

ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದ್ದು, ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 3 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇಂದಿನಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.