Home » ಕರ್ನಾಟಕದಲ್ಲಿ ಜೋರಾದ ಮಳೆ ಅಬ್ಬರ – ನಾಳೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಕರ್ನಾಟಕದಲ್ಲಿ ಜೋರಾದ ಮಳೆ ಅಬ್ಬರ – ನಾಳೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

0 comments

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಲೇ ಇದೆ. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ. ಮುನ್ನೆಚ್ಚರಿಕೆಯಾಗಿ ಮಳೆಯ ತೀವ್ರತೆ ಹೆಚ್ಚಿರುವ ತಾಲ್ಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಪಶ್ಚಿಮ ಘಟ್ಟಗಳ ಮಲೆನಾಡು ಭಾಗದಲ್ಲಿ ಮತ್ತು ಹೆದ್ದಾರಿಗಳ ಪಕ್ಕದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

You may also like