Home » Puttur : ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ – ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್

Puttur : ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ – ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್

0 comments

Puttur : ಪುತ್ತೂರಲ್ಲಿ ಬಿಜೆಪಿ ಮುಖಂಡ (Puttur BJP Leader) ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ,  ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಈ ವಿಚಾರ ಹೈಕೋರ್ಟ್ ಮೆಟ್ಟಿಲನ್ನು ಕೂಡ ಏರಿತ್ತು. ಇದೀಗ ಈ ಪ್ರಕರಣದ ಕುರಿತಾಗಿ ಹೈಕೋರ್ಟ್ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಈ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಯುವತಿ ಹಾಗೂ ಮಗುವನ್ನು ಅನಾಥವನ್ನಾಗಿಸುವ ಬದಲು ತಂದೆಯಾಗಿ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ. ಇಲ್ಲದಿದ್ದರೆ ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ಪ್ರಶ್ನಿಸಿದ್ದು, ಇದಕ್ಕೆ ಅಭಿಪ್ರಾಯ ತಿಳಿಸಿ ಎಂದು ಹೇಳಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.

ಇನ್ನೂ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ ಕೃಷ್ಣ ಜೆ.ರಾವ್ ಪರ ಪಿ.ಪಿ.ಹೆಗ್ಡೆ ವಾದ ಮಂಡಿಸಿದ್ದು, 7 ವರ್ಷಗಳ ಪ್ರೀತಿ ಇತ್ತು, ಕ್ರಿಮಿನಲ್ ಕೇಸ್ ನಿಂದಾಗಿ ರಾಜಿಯಾಗಿಲ್ಲ. ರಾಜಕೀಯ ವಿರೋಧಿಗಳು ಆರೋಪಿ ತಂದೆಯ ತೇಜೋವಧೆ ಮಾಡಿದ್ದಾರೆ. ಕ್ರಿಮಿನಲ್ ಕೇಸ್ ನಲ್ಲೂ ಆರೋಪಿಗಳನ್ನಾಗಿಸಿದ್ದಾರೆಂದು ವಾದಿಸಿದ್ದಾರೆ.

You may also like