

High Court : ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಸಂದರ್ಭದಲ್ಲಿ ಕೆಲವೊಮ್ಮೆ ಪೊಲೀಸರು ಏನಾದರೂ ಸಬೂಬು ಹೇಳಿ ತಮ್ಮ ದೂರುಗಳನ್ನು ಸ್ವೀಕರಿಸುವುದಿಲ್ಲ. ಹೀಗೆ ನೀವೇನಾದರೂ ಪೊಲೀಸ್ ಠಾಣೆಗೆ ದೂರು ಸ್ವೀಕರಿಸಲು ಹೋದಾಗ ದೂರು ತಿರಸ್ಕೃತವಾದರೆ ನೇರವಾಗಿ ನಮ್ಮಲ್ಲಿಗೆ ಬನ್ನಿ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಯಸ್, ‘ನಮ್ಮ ದೂರನ್ನು ಪರಿಗಣಿಸಲು ಹುಳಿಮಾವು ಪೊಲೀಸ್ ಠಾಣೆ ಅಧಿಕಾರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ಬಿ.ಎಚ್.ನಾಗರಾಜು ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ಕರ್ನಾಟಕ ಹೈಕೋರ್ಟ್ “ಪೊಲೀಸ್ ಠಾಣೆಯಲ್ಲಿ ದೂರನ್ನು ತಿರಸ್ಕರಿಸಿದರೆ ದೂರುದಾರರು ನೇರವಾಗಿ ಹೈಕೋರ್ಟ್ ಮೊರೆಹೋಗಬಹುದು” ಎಂದು ಆದೇಶಿಸಿದೆ.
‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ-2023ರ (ಬಿಎನ್ಎಸ್ಎಸ್) ಕಲಂ 173(4)ರ ಅಡಿಯಲ್ಲಿ ಸೂಚಿಸಲಾದ ಉನ್ನತ ಅಧಿಕಾರಿ ಮತ್ತು ಮ್ಯಾಜಿಸ್ಟ್ರೇಟ್ ಅವರನ್ನು ಸಂಪರ್ಕಿಸುವ ವಿಧಾನವು ಮಾಹಿತಿಯನ್ನು ದಾಖಲಿಸಲು ನಿರಾಕರಿಸುವ ಪ್ರಕರಣಗಳಿಗೆ ಮಾತ್ರವೇ ಅನ್ವಯಿಸುತ್ತದೆ. ಹೊರತಾಗಿ ತರ್ಕಬದ್ಧ ಅನುಮೋದನೆಯ ಮೂಲಕ ದೂರನ್ನು ತಿರಸ್ಕರಿಸುವ ಪ್ರಕರಣಗಳಿಗೆ ವಿಸ್ತರಿಸುವುದಿಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.













