Homelatestಜಪ್ತಿ ಮಾಡಿದ ವಾಹನಗಳ ಕುರಿತು ಹೈಕೋರ್ಟ್ ಮಹತ್ವದ ಆದೇಶ!

ಜಪ್ತಿ ಮಾಡಿದ ವಾಹನಗಳ ಕುರಿತು ಹೈಕೋರ್ಟ್ ಮಹತ್ವದ ಆದೇಶ!

Hindu neighbor gifts plot of land

Hindu neighbour gifts land to Muslim journalist

ಅಪರಾಧ ಪ್ರಕರಣಗಳಿಗೆ ಬಳಕೆಯಾಗಿ ಜಪ್ತಿ ಮಾಡಿದ ವಾಹನಗಳ ಕುರಿತಾಗಿ ಹೈ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ವಾಹನ ಗುರುತಿಸುವ ಉದ್ದೇಶದಿಂದ ಅದರ ಬಿಡುಗಡೆಗೆ ಕೋರಿದ ಅರ್ಜಿ ತಿರಸ್ಕರಿಸುವುದು ಸರಿಯಲ್ಲ. ಇದರ ಜೊತೆಗೆ ಪೊಲೀಸ್‌ ಠಾಣೆ ಮುಂದೆ ಇರಿಸಲು ಅವಕಾಶ ನೀಡಿದರೂ ಕೂಡ ವಾಹನಗಳು ಹಾಳಾಗುವ ಸಂಭವ ಹೆಚ್ಚಿದೆ. ಇದಲ್ಲದೆ, ವಾಹನಗಳನ್ನು ಗುರುತಿಸುವುದಕ್ಕಾಗಿ ಪೊಲೀಸರು ವಾಹನಗಳನ್ನು ಕೋರ್ಟ್‌ಗೆ ತರಲು ಕೂಡ ಸಾಧ್ಯವಿಲ್ಲದೆ ಇರುವುದರಿಂದ ಸುಪ್ರಿಂಕೋರ್ಟ್‌ ರೂಪಿಸಿರುವ ಮಾರ್ಗಸೂಚಿಯಂತೆ ತನಿಖಾಧಿಕಾರಿ ಪಂಚನಾಮೆಯೊಂದಿಗೆ ವಾಹನದ ಪೋಟೊ ತೆಗೆದುಕೊಂಡು ಬಳಿಕ ಬಿಡುಗಡೆ ಮಾಡಬೇಕು ಎಂದು ಹೈಕೋರ್ಟ್‌ ಆದೇಶ ನೀಡಿದೆ.

ಅಪರಾಧ ಪ್ರಕರಣಗಳಿಗೆ ಬಳಕೆಯಾಗಿದೆಯೆಂಬ ಕಾರಣಕ್ಕೆ ಪೊಲೀಸರು ಜಪ್ತಿ ಮಾಡಿರುವ ತಮ್ಮ ವಾಹನ ಬಿಡುಗಡೆ ಮಾಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಜವ್ವಾಜಿ ಧನತೇಜ, ಜಯಲಕ್ಷ್ಮೇ ಮತ್ತು ನಂದಿನಿ ಎಸ್‌. ಪ್ರಕಾಶ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅಪರಾಧ ಪ್ರಕರಣಗಳಿಗೆ ಬಳಕೆಯಾಗಿ ಜಪ್ತಿ ಮಾಡಿದ ವಾಹನಗಳನ್ನು ತನಿಖಾಧಿಕಾರಿಗಳು ಪಂಚನಾಮೆಯೊಂದಿಗೆ ನಾನಾ ಕೋನದಲ್ಲಿ ಫೋಟೊ ತೆಗೆದುಕೊಂಡು ಬಿಡುಗಡೆ ಮಾಡಬೇಕೆಂದು ಈ ಪ್ರಕರಣದ ವಿಚಾರಣೆ ಸಂದರ್ಭ ಹೈಕೋರ್ಟ್‌ ಆದೇಶ ನೀಡಿದೆ.

ಕೊಲೆ ಯತ್ನ, ಜೀವ ಬೆದರಿಕೆ ಮತ್ತು ವ್ಯಕ್ತಿಯನ್ನು ಅಕ್ರಮವಾಗಿ ಕೂಡಿ ಹಾಕಿದ ಅಪರಾಧಕ್ಕೆ ಬಳಕೆಯಾದ ಆರೋಪದ ಮೇಲೆ ಅರ್ಜಿದಾರರ ಒಡೆತನದ ಹೋಂಡಾ ಸಿಟಿ ಕಾರು ಮತ್ತು ಹೋಂಡಾ ಡಿಯೋ ಬೈಕ್‌ ಮತ್ತು ಬಜಾಜ್‌ ಆಟೋರಿಕ್ಷಾವನ್ನು 2021ರಲ್ಲಿ ರಾಜರಾಜೇಶ್ವರಿ ಠಾಣಾ ಪೊಲೀಸರು ಜಪ್ತಿ ಮಾಡಿದ್ದರು.

ಅಪರಾಧ ಕೃತ್ಯಕ್ಕೆ ಬಳಕೆಯಾದ ವಾಹನಗಳನ್ನು ಠಾಣೆ ಮುಂದೆ ನಿಷ್ಕ್ರಿಯವಾಗಿ ನಿಲ್ಲಿಸಬಾರದೆಂದು ಸುಂದರ್‌ಬಾಯ್‌ ಅಂಬಲಾಲ್‌ ದೇಸಾಯಿ ಮತ್ತು ಗುಜರಾತ್‌ ಸರಕಾರ ನಡುವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಆದೇಶಿಸಿದ್ದು, ಅದರಂತೆ ಜಪ್ತಿಯಾದ ವಾಹನಗಳ ಮಾಲೀಕರು ಅವುಗಳ ಬಿಡುಗಡೆಗೆ ಸಲ್ಲಿಸಿದ ಅರ್ಜಿಗಳನ್ನು ಕೆಲವೊಂದು ಷರತ್ತು ವಿಧಿಸುವ ಮೂಲಕ ಮ್ಯಾಜಿಸ್ಪ್ರೇಟ್‌ ಅಥವಾ ಕೋರ್ಟ್‌ ಇತ್ಯರ್ಥಪಡಿಸಬೇಕು ಎಂದು ಕೂಡ ಸೂಚನೆ ನೀಡಿದೆ. ಅಲ್ಲದೆ, ಈ ಕುರಿತು ಅಧೀನ ನ್ಯಾಯಾಲಯ ಹೊರಡಿಸಿದ ಆದೇಶ ರದ್ದುಪಡಿಸಿರುವ ನ್ಯಾಯಪೀಠ, ‘ಧಿ’ ಅರ್ಜಿದಾರರು ಆರೋಪಿಗಳಲ್ಲದೆ ಆ ವಾಹನಗಳ ಮಾಲೀಕರಾದ ಕಾರಣ ಕಾರಿಗೆ ಮೂರು ಲಕ್ಷ, ಬೈಕ್‌ಗೆ 30 ಸಾವಿರ ಮತ್ತು ಮತ್ತು ಆಟೋರಿಕ್ಷಾಗೆ 75 ಸಾವಿರ ರೂ. ಭದ್ರತಾ ಖಾತರಿ ಪಡೆದು ಬಿಡುಗಡೆ ಮಾಡಬೇಕು ಎಂದು ನಿರ್ದೇಶಿಸಿದೆ.

RELATED ARTICLES

Most Popular

Recent Comments