Home » ಶಿರಾಡಿ ಘಾಟಲ್ಲಿ ಗುಡ್ಡ ಕುಸಿತ!!

ಶಿರಾಡಿ ಘಾಟಲ್ಲಿ ಗುಡ್ಡ ಕುಸಿತ!!

0 comments

ಹಾಸನ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ (ಬೆಂಗಳೂರು-ಮಂಗಳೂರು ರಸ್ತೆ) ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದೆ. 

ಘಟನೆ ಸಂಭವಿಸುತ್ತಿದ್ದಂತೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಜೆಸಿಬಿ ಯಂತ್ರಗಳೊಂದಿಗೆ ಸ್ಥಳಕ್ಕೆ ಧಾವಿಸಿ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯಕ್ಕೆ ಸಂಚಾರಕ್ಕೆ ದೊಡ್ಡ ಮಟ್ಟದ ತೊಂದರೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿದೆ. ಇತ್ತೀಚೆಗೆ ಚತುಷ್ಪಥ (ನಾಲ್ಕು ಪಥ) ರಸ್ತೆ ನಿರ್ಮಾಣದ ಕಾಮಗಾರಿಗಾಗಿ ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ಅಡಿ ಎತ್ತರದ ಗುಡ್ಡಗಳನ್ನು ಕತ್ತರಿಸಲಾಗಿತ್ತು.

ಈಗ ನಿರಂತರವಾಗಿ ಸುರಿಯುತ್ತಿರುವ ಧೋ ಮಳೆಗೆ ಮಣ್ಣು ಸಂಪೂರ್ಣ ಸಡಿಲಗೊಂಡಿದ್ದು, ಬೃಹತ್ ಗಿಡ-ಮರಗಳ ಸಮೇತ ರಸ್ತೆಯ ಕಡೆಗೆ ಜಾರಿ ಬೀಳುತ್ತಿದೆ. ಮಳೆ ಹೀಗೆಯೇ ಮುಂದುವರಿದರೆ ಇಡೀ ಬೆಟ್ಟವೇ ರಸ್ತೆಗೆ ಉರುಳಿ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಅಪಾಯ ಎದುರಾಗಿದೆ.

You may also like