Home News ಮಂಗಳೂರು | ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದು ಹೋದ ಬಸ್, ಸವಾರ ಸ್ಥಳದಲ್ಲೇ...

ಮಂಗಳೂರು | ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದು ಹೋದ ಬಸ್, ಸವಾರ ಸ್ಥಳದಲ್ಲೇ ಸಾವು

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದು ಹೋದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.

ಸ್ಕೂಟರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಬಿದ್ದಿದ್ದ. ಆ ಸಂದರ್ಭ ಹಿಂದಿನಿಂದ ಧಾವಿಸಿ ಬರುತ್ತಿದ್ದ ಬಸ್ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದು ಹೋಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಸತ್ತು ಹೋಗಿದ್ದಾನೆ.

ಕೊಣಾಜೆಯ ಮುಡಿಪು ಬಳಿ ಈ ಅವಘಡ ನಡೆದಿದ್ದು,
ಮೃತನನ್ನು ಉಪ್ಪಳ ಮೂಲದ ಚೌಹಾರ್ (20) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಚೌಹಾರ್ ನು ಬಾಳೆಪುಣಿ ಕಡೆಯಿಂದ ಮುಡಿಪು ಕಡೆಗೆ ಹೋಗುತ್ತಿದ್ದ ವೇಳೆ ಮುಡಿಪು ಪೆಟ್ರೋಲ್ ಪಂಪು ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದ. ಆಗ ಬಂದ ಬಸ್ ನಡಿಗೆ ಬಿದ್ದು ಸವಾರ ಕೊನೆಯುಸಿರೆಳೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.