Home » ʼಸಿಎಂ ಆದ್ಮೇಲಾದ್ರೂ ಬ್ಲೂಫಿಲಂ ಮಾಡೋದು, ಪೋಸ್ಟರ್‌ ಅಂಟ್ಸೋದು ಬಿಡ್ತಾರೆ ಅನ್ಕೊಂಡಿದ್ದೆ, ಆದ್ರೆ ಬಿಡ್ಲಿಲ್ಲ – ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿ

ʼಸಿಎಂ ಆದ್ಮೇಲಾದ್ರೂ ಬ್ಲೂಫಿಲಂ ಮಾಡೋದು, ಪೋಸ್ಟರ್‌ ಅಂಟ್ಸೋದು ಬಿಡ್ತಾರೆ ಅನ್ಕೊಂಡಿದ್ದೆ, ಆದ್ರೆ ಬಿಡ್ಲಿಲ್ಲ – ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿ

0 comments

ರಾಜ್ಯದ ಸಿಎಂ ಆದ ಮೇಲೆಯೂ ಬ್ಲೂ ಫಿಲ್ಮ್ ‌ಮಾಡಿಸುವುದು, ಪೋಸ್ಟರ್ ಅಂಟಿಸುವುದು ಬಿಡುತ್ತಾರೆ ಅಂದುಕೊಂಡಿದ್ದೆ. ಆ ಚಾಳಿ ಡಿ.ಕೆ. ಶಿವಕುಮಾರ್‌ಗೆ ಇನ್ನೂ ಹೋಗಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಿಡದಿಯಲ್ಲಿ (Bidadi) ಕುಮಾರಸ್ವಾಮಿ ಮತ್ತು ಕುಟುಂಬದ ವಿರುದ್ದ ಪೋಸ್ಟರ್ ಅಂಟಿಸಿರೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ ಅವರು ರಾಜ್ಯದ ಸಿಎಂ ಆದಮೇಲಾದ್ರೂ ಬ್ಲೂಫಿಲ್ಮ್‌ ಮಾಡೋದು, ಪೋಸ್ಟರ್‌ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ. ಆ ಖಯಾಲಿ ಇನ್ನೂ ಡಿಕೆ ಶಿವಕುಮಾರ್‌ಗೆ ಹೋಗಿಲ್ಲ. ಪೋಸ್ಟರ್ ಅಂಟಿಸಿ ಪ್ರಚಾರ ಮಾಡೋದಾ? ನನ್ನದು ಬಿಡಿ, ನನ್ನ ಹೆಂಡತಿಯದ್ದೂ ಫೋಟೋ ಹಾಕಿದ್ದಾರೆ. 100 ಎಕರೆ ಅಂತ ಪೋಸ್ಟರ್ ಅಂತ ನಂದು ನಿಖಿಲ್‌ ಫೋಟೋ ಹಾಕಿದ್ದಾರೆ. 46 ಎಕರೆ 40 ವರ್ಷದ ಹಿಂದೆ ಕಷ್ಟ ಪಟ್ಟು ಖರೀದಿ ಮಾಡಿರೋ ಜಮೀನು. ಅದು ಬಿಟ್ಟು ನನ್ನ ಹೆಸರಿನಲ್ಲಿ ಯಾವ ಜಮೀನು ಇದೆ. 100 ಎಕರೆ ಅಂತ ಪೋಸ್ಟರ್ ಹಾಕಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು 36-37 ಎಕರೆ ತಗೊಂಡಿದ್ದಾರೆ. ಅದು ಖರೀದಿ ಮಾಡಿರೋದು. ಖರೀದಿ ಮಾಡಿರೋದನ್ನ ಯಾವನೋ ಹೆಸರಿನಲ್ಲಿ ಪೋಸ್ಟರ್ ಹಾಕಿ ಕೊಡಿ ಅಂದರೆ ಹೇಗೆ? ಅಂತ ಪ್ರಶ್ನಿಸಿದರು.

ಕೈಲಾಗದವನ ಕೊನೆಯ ಅಸ್ತ್ರವೇ ಅಪಪ್ರಚಾರ. ಅದನ್ನೇ ಡಿ.ಕೆ. ಶಿವಕುಮಾರ್ ಮಾಡುತ್ತಿದ್ದಾರೆ. ಪೋಸ್ಟರ್ ಅಂಟಿಸಿ ‌ಅಪಪ್ರಚಾರ ಮಾಡುತ್ತಿದ್ದಾರೆ. ನನ್ನ ಪತ್ನಿಯ ಚಿತ್ರವನ್ನು ಪೋಸ್ಟರ್‌ನಲ್ಲಿ ಹಾಕಿದ್ದಾರೆ. ಹಾಗೆ ನೋಡಿದರೆ ಈ ವ್ಯಕ್ತಿಯ ಬಗ್ಗೆ ನಾವು ಎಷ್ಟು ಪೋಸ್ಟರ್‌ಗಳನ್ನು ಅಂಟಿಸಬೇಕು?ನಿಮಗೆ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಗೊತ್ತಿರಬಹುದು. ಸತ್ತವರ ಹೆಬ್ಬೆಟ್ಟು ಒತ್ತಿಸಿಕೊಂಡು ಭೂಮಿ ಲೂಟಿ ಹೊಡೆದ ಕೆಟ್ಟ ಚರಿತ್ರೆ ಈ ವ್ಯಕ್ತಿಯದು. ಬೆನ್ನಿಗಾನಹಳ್ಳಿಯಲ್ಲಿ ಸತ್ತವರ ಹೆಬ್ಬಟ್ಟು ಒತ್ತಿಸಿಕೊಂಡು ಭೂಮಿ ಲಪಟಾಯಿಸಿದ ಈ ವ್ಯಕ್ತಿ ಇವತ್ತು ತನ್ನ ಚೀಲಾಗಳಿಂದ ಪೋಸ್ಟರ್ ಹಾಕಿಸಿದ್ದಾರೆ. ಜನಕ್ಕೆ ಗೊತ್ತಿದೆ, ನಾನು ಏನು? ಈ ವ್ಯಕ್ತಿಯ ಯೋಗ್ಯತೆ ಏನು ಎಂದು ಎಂದರು 

ಇದು ಡಿಕೆಶಿ ವಿಕೃತ ಮನಸು. ಇವರು ಮೊದಲಿಂದ ಬಂದಿರೋದು ಇದರಿಂದಲೇ. ಈ ಖಯಾಲಿಯಲ್ಲಿ ಬಂದ ವ್ಯಕ್ತಿ ಸಿಎಂ ಆದ ಮೇಲೂ ಸಿಎಂ ಕುರ್ಚಿಗೆ ಗೌರವ ಬೇಡವಾ? ಪೋಸ್ಟರ್ ಹಾಕಿಕೊಂಡು ಅಪ ಪ್ರಚಾರ ಮಾಡ್ತಾ ಇದ್ದಾರೆ. ಅಶೋಕ್, ನಾರಾಯಣಸ್ವಾಮಿ, ವಿಜಯೇಂದ್ರ ವಿರುದ್ಧ ಪೋಸ್ಟರ್ ಹಾಕಿದ್ದಾರೆ. ತಪ್ಪು ಮಾಡಿದ್ರೆ ಸಿಎಂ ಆಗಿ ಆಕ್ಷನ್ ತಗೊಳೋಕೆ ಹೇಳಿ ಅಧಿಕಾರಿಗಳಿಗೆ. ಸುಮ್ಮನೆ ಯಾಕೆ ಪೋಸ್ಟರ್ ಹಾಕಿದ್ದೀರಾ? ಇಲ್ಲಿವರೆಗೂ ಕಾಂಗ್ರೆಸ್ ನ ಮಂತ್ರಿಗಳು ಶಾಸಕರದ್ದೇ ನಡೆದು ಹೋಯ್ತು. ವಿಧಾನಸಭೆ ಕಲಾಪದಲ್ಲಿ ನಡೆದು ಹೋಯ್ತು. ಮತ್ತೆ ಅವರನ್ನ ಬಾಯಿ ಮುಚ್ಚಿಸಿದ್ರು. ಸತ್ಯ ಹೇಳ್ತೀನಿ ಅಂತ ಅವರು ಬಾಯಿಯೇ ತೆಗೆಯಲಿಲ್ಲ. ಇನ್ನು ಮುಂದೆಯಾದ್ರು ನಿಲ್ಲುತ್ತೇನೋ ಅಂದುಕೊಂಡಿದ್ವಿ, ಆದ್ರೆ ಆ ಖಯಾಲಿ ಹೋಗಿಲ್ಲ ಎಂದು ಕಿಡಿ ಕಾರಿದರು. 

banner

You may also like