Karnataka Budget -2026: ವಿಧಾನಸೌಧದಲ್ಲಿ 17ನನೇ ಬಾರಿಗೆ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಾರೆ. ಇದೀಗ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ತೆ -ಸೊಸೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಯಸ್, ರಾಜ್ಯದ ಅತ್ಯಂತ ಜನಪ್ರಿಯ ಗೃಹಲಕ್ಷ್ಮಿ ಯೋಜನೆಗೆ (Gruha Lakshmi Scheme) ಈ ಸಾಲಿನ ಬಜೆಟ್ನಲ್ಲಿ ಬರೋಬ್ಬರಿ 28,608 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಮೀಸಲಿಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.
ಈ ಮೂಲಕ ಸರ್ಕಾರದ ಬಳಿ ದುಡ್ಡಿಲ್ಲ, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿದೆ, ಗೃಹಲಕ್ಷ್ಮಿಗೆ ಹಣ ಎಲ್ಲಿಂದ ತರ್ತಾರೆ?” ಅಂತ ವಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿದ್ದವು. ಆದರೆ ಈಗ ಬಜೆಟ್ ಭಾಷಣದ ಶುರುವಿನಲ್ಲೇ ಬರೋಬ್ಬರಿ 28,608 ಕೋಟಿ ರೂ. ತೆಗೆದಿರಿಸುವ ಮೂಲಕ, ಸಿಎಂ ಸಿದ್ದರಾಮಯ್ಯನವರು ಟೀಕಾಕಾರರಿಗೆ ತಕ್ಕ ಹಾಗೂ ಖಡಕ್ ಉತ್ತರ ಕೊಟ್ಟಿದ್ದಾರೆ.
