HomeNewsಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

Hindu neighbor gifts plot of land

Hindu neighbour gifts land to Muslim journalist

ದೆಹಲಿ : ಕರ್ನಾಟಕದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳು ಕೇಳುತ್ತಿದ್ದು, ಈ ಕುರಿತು ಸಂಸದ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟನೆ ನೀಡಿದ್ದಾರೆ.

‘2023ರ ತನಕ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ’ ಎಂದು ಹೇಳಿದ್ದಾರೆ. ಈ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಮಾಡುವ ಪ್ರಸ್ತಾಪ ಹೈಕಮಾಂಡ್ ಮಟ್ಟದಲ್ಲಿ ಇಲ್ಲ. ಸಿಎಂ ಬೊಮ್ಮಾಯಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಈ ರೀತಿಯಾಗಿ ಹತ್ತು ಸಲ ಮಾತನಾಡಿರುವುದನ್ನು ಕೇಳಿದ್ದೇನೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಮತ್ತು ಪಂಚಮಸಾಲಿ ಸಮುದಾಯ ಭವನ ಸಮಾರಂಭದಲ್ಲಿ ‘ಕ್ಷೇತ್ರದ ಜನರ ಋಣ ತೀರಿಸಲು ಸಾಧ್ಯವೇ ಇಲ್ಲ. ನಿಮ್ಮ ಪ್ರೀತಿ, ವಿಶ್ವಾಸದ ಮುಂದೆ ಯಾವ ಅಧಿಕಾರವೂ ಮಹತ್ವದ್ದಲ್ಲ. ಅಧಿಕಾರ, ಸ್ಥಾನಮಾನ ಶಾಶ್ವತವಲ್ಲ. ಬಸವರಾಜ ಬೊಮ್ಮಾಯಿ ಎಂಬುದಷ್ಟೇ ಶಾಶ್ವತ. ಹಿಂದಿರುವ ಪದನಾಮವಲ್ಲ’ ಎಂದು ಹೇಳಿದ್ದರು

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments