Home Karnataka State Politics Updates ನೇಕಾರರಿಗೆ ರಾಜ್ಯ ಸರಕಾರದಿಂದ ಮತ್ತೊಂದು ಭರ್ಜರಿ ಗುಡ್‌ ನ್ಯೂಸ್‌!!

ನೇಕಾರರಿಗೆ ರಾಜ್ಯ ಸರಕಾರದಿಂದ ಮತ್ತೊಂದು ಭರ್ಜರಿ ಗುಡ್‌ ನ್ಯೂಸ್‌!!

Hindu neighbor gifts plot of land

Hindu neighbour gifts land to Muslim journalist

ಈಗಾಗಲೇ ನೇಕಾರರಿಗೆ ಎರಡು ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂಬ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರವು, ಇದರ ಬೆನ್ನಲ್ಲೇ ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಕೆಯ ಬಗ್ಗೆ ಮತ್ತೊಂದು ಶುಭಸುದ್ದಿಯನ್ನು ನೀಡಿದೆ.

ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮಿಳುನಾಡಿನ ಮಾದರಿಯಲ್ಲಿಯೇ ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಘೋಷಿಸಿದ್ದಾರೆ.

ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಬಗ್ಗೆ ಅಧಿಕೃತವಾಗಿ ನಾಳೆ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದರು. ಈ ಮೂಲಕ ನೇಕಾರರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ರಾಜ್ಯ ಸರ್ಕಾರವು ನೀಡಿದೆ.