Home News Karnataka Govt: ಕಾಂಗ್ರೆಸ್ ಸರ್ಕಾರದಿಂದ ಸ್ವಾಮೀಜಿಗೆ ಪ್ರಮೋಷನ್ ಭಾಗ್ಯ!!

Karnataka Govt: ಕಾಂಗ್ರೆಸ್ ಸರ್ಕಾರದಿಂದ ಸ್ವಾಮೀಜಿಗೆ ಪ್ರಮೋಷನ್ ಭಾಗ್ಯ!!

Hindu neighbor gifts plot of land

Hindu neighbour gifts land to Muslim journalist

Karnataka Govt : ರಾಜ್ಯ ಸರ್ಕಾರವು ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಯಾಕೆಂದರೆ ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿ ಪಡೆದು ಸನ್ಯಾಸಿಯಾಗಿರುವ ನಾಡಿನ ಪ್ರಬಲ ಸ್ವಾಮೀಜಿಯವರ ಹೆಸರನ್ನು ಕೂಡ ದಾಖಲಿಸಲಾಗಿದೆ.

ಹೌದು, ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಇದರಲ್ಲಿ ಹೆಚ್.ಎಲ್. ನಾಗರಾಜ್ ಅವರು ಸೇವೆಯಿಂದ ನಿವೃತ್ತರಾಗಿ ನಂತರ ಸನ್ಯಾಸ ಸ್ವೀಕರಿಸಿ ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಆಧ್ಯಾತ್ಮಿಕ ಜೀವನ ನಡೆಸುತ್ತಿರುವುದು ತಿಳಿದಿದ್ದರೂ, ಅವರ ಹೆಸರನ್ನು ಸೇವೆಯಲ್ಲಿರುವ ಅಧಿಕಾರಿಗಳ ಪಟ್ಟಿಯಲ್ಲಿ ಸೇರಿಸಿ ಪದೋನ್ನತಿ ನೀಡಲಾಗಿದೆ.

ಹೆಚ್.ಎಲ್. ನಾಗರಾಜ್ ಅವರು ಸೇವೆಯಿಂದ ನಿವೃತ್ತರಾಗಿ ನಂತರ ಸನ್ಯಾಸ ಸ್ವೀಕರಿಸಿ ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಆಧ್ಯಾತ್ಮಿಕ ಜೀವನ ನಡೆಸುತ್ತಿರುವುದು ತಿಳಿದಿದ್ದರೂ, ಅವರ ಹೆಸರನ್ನು ಸೇವೆಯಲ್ಲಿರುವ ಅಧಿಕಾರಿಗಳ ಪಟ್ಟಿಯಲ್ಲಿ ಸೇರಿಸಿ ಪದೋನ್ನತಿ ನೀಡಲಾಗಿದೆ. 

ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರ ಸಹಿಯೊಂದಿಗೆ ಈ ಆದೇಶ ಹೊರಬಿದ್ದಿದೆ. ಬಡ್ತಿ ನೀಡುವ ಮೊದಲು ಆಯಾ ಅಧಿಕಾರಿಗಳು ಸೇವೆಯಲ್ಲಿದ್ದಾರೆಯೇ? ನಿವೃತ್ತಿ ಹೊಂದಿದ್ದಾರೆಯೇ? ಅಥವಾ ಸ್ವಯಂ ನಿವೃತ್ತಿ ಪಡೆದಿದ್ದಾರೆಯೇ? ಎಂಬ ಕನಿಷ್ಠ ಮಾಹಿತಿಯೂ ಇಲ್ಲದೆ ಈ ಪಟ್ಟಿ ಸಿದ್ಧಪಡಿಸಲಾಗಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ. ವಿಪಕ್ಷಗಳಂತೂ ಇದನ್ನು ಕಟುವಾಗಿ ಟೀಕಿಸಿವೆ.