Home » ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣ ಅಸಿಸ್ಟೆಂಟ್ ಪ್ರೊಫೆಸರ್ ಆತ್ಮಹತ್ಯೆ

ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣ ಅಸಿಸ್ಟೆಂಟ್ ಪ್ರೊಫೆಸರ್ ಆತ್ಮಹತ್ಯೆ

by Praveen Chennavara
0 comments

Hindu neighbor gifts plot of land

Hindu neighbour gifts land to Muslim journalist

ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ತೀವ್ರ ಬೇಸರಗೊಂಡು ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ಈ ಪ್ರಕರಣ ನಡೆದಿದೆ.

ಚಿಂತಾಮಣಿ ತಾಲ್ಲೂಕು ಟಿ. ದೇವಪಲ್ಲಿ ಮೂಲದ ಡಿ.ಎಸ್. ಮೀನಾ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಎಂಎ ಪದವೀಧರೆ ಆಗಿರುವ ಇವರು 18 ವರ್ಷಗಳ ಹಿಂದೆ ಲಚ್ಚಿ ರೆಡ್ಡಿ ಎಂಬವರೊಂದಿಗೆ ವಿವಾಹವಾಗಿದ್ದರು.

ಇವರು ಕಾಲೇಜೊಂದರಲ್ಲಿ ಕನ್ನಡ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

banner

ಕೆಎಎಸ್ ಪರೀಕ್ಷೆ ಬರೆದಿದ್ದ ಮೀನಾ, ಆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.

ಮನೆಯಲ್ಲಿ ಯಾರೂ ಇರದಿದ್ದ ಸಂದರ್ಭದಲ್ಲಿ ಮನೆ ಮೇಲಿನ ಶೆಡ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment