Home News Temple: ನಿಧಿ ಆಸೆಗಾಗಿ ಮಧ್ಯ ರಾತ್ರಿ ದೇವಸ್ಥಾನದ ಬಂಡೆಯನ್ನೇ ಕೊರೆದ ಖದೀಮರು: ಸಿಕ್ಕಿದ್ದೇನು?

Temple: ನಿಧಿ ಆಸೆಗಾಗಿ ಮಧ್ಯ ರಾತ್ರಿ ದೇವಸ್ಥಾನದ ಬಂಡೆಯನ್ನೇ ಕೊರೆದ ಖದೀಮರು: ಸಿಕ್ಕಿದ್ದೇನು?

Hindu neighbor gifts plot of land

Hindu neighbour gifts land to Muslim journalist

Temple: ನಿಧಿ ಆಸೆಯಲ್ಲಿ ಕೆಲವ್ರು ಮಾಟ, ಮಾತ್ರ, ನರ ಬಲಿ, ಪ್ರಾಣಿ ಬಲಿ ಹೀಗೆ ನಾನಾ ಪ್ರಯತ್ನ ಮಾಡುತ್ತಾರೆ. ಅಂತೆಯೇ ನಿಧಿ ಆಸೆಗಾಗಿ ಕಳ್ಳರು ಮಧ್ಯರಾತ್ರಿ ದೇವಸ್ಥಾನದ ಬಳಿ ಮೂರು ಕಡೆ ಬಂಡೆ ಕೊರೆದಿದ್ದಾರೆ.

ಈ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ, ವಡ್ಢರಹಳ್ಳಿ ಗ್ರಾಮದ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದ (Temple) ಬಳಿ  ನಡೆದಿದ್ದು, ಕೆಲ ಕಿಡಿಗೇಡಿಗಳು ನಿಧಿ ಶೋಧ ನಡೆಸಿದ್ದಾರೆ. ಅರಿಶಿನ, ಕುಂಕುಮ, ತೆಂಗಿನಕಾಯಿ ಹಾಗೂ ವಸ್ತ್ರವನ್ನಿಟ್ಟು ಕಿಡಿಗೇಡಿಗಳು ಪೂಜೆ ಮಾಡಿದ್ದಾರೆ. ಬಳಿಕ ನಿಧಿ ಸಿಗದೇ ಅರ್ಧಕ್ಕೆ ಬಿಟ್ಟು ಪರಾರಿಯಾಗಿದ್ದಾರೆ. ದೇವಸ್ಥಾನಕ್ಕೆ ಪೂಜೆ ಮಾಡಲು ಬಂದ ಅರ್ಚಕರು ನಿಧಿಗೆ ಶೋಧ ನಡೆದಿರುವುದನ್ನು ಕಂಡು ಬಿಚ್ಚಿಬಿದ್ದಿದ್ದಾರೆ.

ವಿಷಯ ತಿಳಿದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಇದೀಗ ನಿಧಿಗಾಗಿ ಮಧ್ಯರಾತ್ರಿ ದೇವಸ್ಥಾನದ ಬಳಿ ಮೂರು ಕಡೆ ಬಂಡೆ ಕೊರೆದಿರುವುದು ಕಂಡು ಬಂದಿದ್ದು, ಸದ್ಯ ದೇವಸ್ಥಾನಕ್ಕೆ ಗ್ರಾಮಸ್ಥರೆಲ್ಲ ಭೇಟಿ ನೀಡಿದ್ದು ದೇವಸ್ಥಾನಕ್ಕೆ ಭದ್ರತೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.