Home News ಕಣಿಯೂರು | ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ಕಣಿಯೂರು | ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Hindu neighbor gifts plot of land

Hindu neighbour gifts land to Muslim journalist

ವಿದ್ಯುತ್ ಶಾಕ್ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಣಿಯೂರಿನಲ್ಲಿ ನಡೆದಿದೆ.

ಕಣಿಯೂರು ಗ್ರಾಮದ ಪೋಯ್ಯ ಮನೆ ನಿವಾಸಿ ನಾಣ್ಯಪ್ಪ ಪೂಜಾರಿ ಮೃತಪಟ್ಟವರು ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಎಂದಿನಂತೆ ನಾಣ್ಯಪ್ಪ ಪೂಜಾರಿಯವರು ಇಂದು ಬೆಳಗ್ಗೆ ತೋಟದ ಕಡೆಗೆ ಹೋಗುತ್ತಿರುವಾಗ, ತಿಳಿಯದೆ ತುಂಡಾಗಿ ಬಿದ್ದಿದ್ದ ತಂತಿಯನ್ನು ತುಳಿದಿದ್ದಾರೆ. ಪರಿಣಾಮ ವಿದ್ಯುತ್ ಶಾಕ್ ಗೆ ಒಳಗಾಗಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.