Mysore : ಚಾಮುಂಡಿ ಬೆಟ್ಟದ (Chamundi Hill) ತಪ್ಪಲಿನಲ್ಲಿರುವ ಸಿದ್ದಾರ್ಥ ಬಡಾವಣೆಯ ಸುರೇಶ್ ಎಂಬುವವರ ನಿವಾಸಕ್ಕೆ ಎಂಟ್ರಿ ಚಿರತೆಯೊಂದು ಎಂಟ್ರಿ ಕೊಟ್ಟಿದ್ದು, ಯಾರಿಗೂ ತಿಳಿಯದೆ 2 ಗಂಟೆ ಕಾಲ ಮಂಚದ ಕೆಳಗೆ ಕುಳಿತಿತ್ತು. ಮಂಚದಡಿ ಚಿರತೆ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆ ತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅವರಿಗೆ ಕಿತ್ತೂರು ಚೆನ್ನಮ್ಮ ಸಾಹಸ ಪ್ರಶಸ್ತಿ ನೀಡಲಾಗುವುದು ಎನ್ನಲಾಗಿತ್ತಿದೆ.


ಹೌದು, ಮೈಸೂರಿನ ಸಿದ್ದಾರ್ಥ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ಚಿರತೆಯೊಂದು, ಸುಮಾರು ಎರಡೂವರೆ ಗಂಟೆಗಳ ಕಾಲ 90 ವರ್ಷದ ವೃದ್ಧೆಯ ಮಂಚದ ಕೆಳಗೆ ಅವಿತುಕೊಂಡಿತ್ತು. ವೃದ್ಧೆ ಶೈಲಜಾ ಅವರು ಹಾಸಿಗೆ ಹಿಡಿದಿದ್ದು, ಅವರಿಗೆ ನಡೆದಾಡಲು ಸಾಧ್ಯವಿಲ್ಲ. ಚಿರತೆ ಮನೆಯೊಳಗೆ ನುಗ್ಗಿದಾಗ ನೇರವಾಗಿ ಈ ಅಜ್ಜಿಯ ರೂಮಿಗೆ ಹೋಗಿ ಮಂಚದ ಕೆಳಗೆ ಮಲಗಿದೆ. ಸುಮಾರು ಎರಡೂವರೆ ಗಂಟೆಗಳ ಕಾಲ ಅಜ್ಜಿ ಮಂಚದ ಮೇಲೆ ಮಲಗಿದ್ದರೆ, ಮಂಚದ ಕೆಳಗೆ ಕ್ರೂರ ಮೃಗ ಚಿರತೆ ಮೌನವಾಗಿ ಕುಳಿತಿತ್ತು. ಬಳಿಕ ಮಂಚದಡಿ ಚಿರತೆ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸೊಸೆ ಸುಜಾತ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ ಧೈರ್ಯ ಮತ್ತು ಅತ್ತೆ-ಸೊಸೆಯ ಪವಿತ್ರ ಬಾಂಧವ್ಯಕ್ಕೆ ಹಿಡಿದ ಕೈಗನ್ನಡಿ. ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ ಎಂದು ಅವರು ಬಣ್ಣಿಸಿದ್ದಾರೆ.
ಅಲ್ಲದೆ ಸುಜಾತಾ ಅವರ ಈ ಅಸಾಧಾರಣ ಶೌರ್ಯ, ಸಾಹಸವನ್ನು ಗೌರವಿಸಲು ಮುಂದಿನ ವರ್ಷದ ಕಿತ್ತೂರು ರಾಣಿ ಚೆನ್ನಮ್ಮ ಸಾಹಸ ಪ್ರಶಸ್ತಿಗೆ ಅವರ ಹೆಸರನ್ನು ಪರಿಗಣಿಸಲು ನಮ್ಮ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

