ಸಿದ್ದರಾಮಯ್ಯನವರ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದ ಜಮೀರ್ ಅಹ್ಮದ್ ಖಾನ್ ಅವರದ್ದು ಎನ್ನಲಾಗುತ್ತಿರುವ ಆಡಿಯೋವೊಂದು ರಾಜ್ಯ ಕಾಂಗ್ರೆಸ್ಸಿನಲ್ಲಿ ಭಾರೀ ಹಲ್’ಚಲ್ ಹುಟ್ಟಿಹಾಕಿ ಅವರಿಗೆ ಸಚಿವ ಸ್ಥಾನ ಕೈತಪ್ಪಿತು ಎನ್ನಲಾಗಿದೆ. ಆದರೆ ಇದೀಗ ಜಮೀರ್ ಅಹ್ಮದ್ ಖಾನ್ ಅವರ ಸಚಿವ ಸ್ಥಾನದ ಬಗ್ಗೆ ಕೋಡಿಮಠದ ಶ್ರೀಗಳು ಭವಿಷ್ಯವನ್ನು ನುಡಿದಿದ್ದಾರೆ.


ಅರಸೀಕೆರೆಯಲ್ಲಿ ಅಲ್ ಅಮೀನ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೋಡಿ ಮಠದ ಶ್ರೀಗಳು ಮಾತನಾಡಿ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ಅಲ್ಲದೇ ಜಮೀರ್ ಅವದ್ದು ಎನ್ನಲಾದ ಆಡಿಯೋ ವಿಚಾರವಾಗಿ ಮಾತನಾಡಿರುವ ಶ್ರೀಗಳು, ಆಡಿಯೋ ಅಪಪ್ರಚಾರ ಮಾಡುವ ಉದ್ದೇಶದಿಂದ ಆಗಿದೆ. ಜಮೀರ್ ಅವರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಅವರು ಮತ್ತೆ ಸಚಿವ ಸ್ಥಾನವನ್ನು ಮರಳಿ ಪಡೆಯುತ್ತಾರೆ ಎಂದು ಹೇಳಿದರು. ಜಮೀರ್ ಅಹ್ಮದ ಖಾನ್ ಅವರು ಇಲ್ಲದೆ ಸರ್ಕಾರ ಆಗಲ್ಲ. ಜಮೀರ್ ಇದ್ದರೆ ಮಾತ್ರ ಅದು ಸರ್ಕಾರ ಎನಿಸಿಕೊಳ್ಳುತ್ತದೆ. ಬೆಂಬಲಿಗರು ಆಕ್ರೋಶಕ್ಕೆ ಒಳಗಾಗಬೇಡಿ. ಶಾಂತಿಯಿಂದ ಇರಿ ಎಂದು ಶ್ರೀಗಳು ಕರೆ ಕೊಟ್ಟಿದ್ದಾರೆ.
