Home » ಕೊಕ್ಕಡ ಸೌತಡ್ಕ ದೇವಾಲಯದ ಅಂಗಣದಲ್ಲಿ ಮಣ್ಣು ಅಗೆದ ಮುಸ್ಲಿಂ ಯುವಕ | ಕಾರಣ ನಿಗೂಢ!!

ಕೊಕ್ಕಡ ಸೌತಡ್ಕ ದೇವಾಲಯದ ಅಂಗಣದಲ್ಲಿ ಮಣ್ಣು ಅಗೆದ ಮುಸ್ಲಿಂ ಯುವಕ | ಕಾರಣ ನಿಗೂಢ!!

by Praveen Chennavara
0 comments

Hindu neighbor gifts plot of land

Hindu neighbour gifts land to Muslim journalist

ಕೊಕ್ಕಡ: ಹಿಂದೂಗಳ ಪ್ರಸಿದ್ದ ಯಾತ್ರಾಸ್ಥಳ ಗಣಪನ ಬಯಲು ಆಲಯವೆಂದೇ ಪ್ರಸಿದ್ಧಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಅಂಗಣದಲ್ಲಿ ಅನ್ಯಕೋಮಿನ ಯುವಕನೊಬ್ಬ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಕೊಂಡು ಹೋಗಿ ಸಂಶಯಾಸ್ಪದವಾಗಿ ವರ್ತಿಸಿದ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಕಲಂದರ್ ಎಂಬಾತ ಸೌತಡ್ಕ ಕ್ಷೇತ್ರದ ಆವರಣದಿಂದ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲವೊಂದರಲ್ಲಿ ತುಂಬಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ಕಲಂದರ್

ಈತ ಜು.24 ರಂದು ದೇವಸ್ಥಾನದಲ್ಲಿ ಜನಸಂದಣಿ ಕಡಿಮೆ ಇರುವ ಸಂದರ್ಭದಲ್ಲಿ ಸಂಶಯಾಸ್ಪದವಾಗಿ ವರ್ತಿಸಿದ್ದು, ಈತ ದೇವಳದ ವಠಾರದಿಂದ ಮಣ್ಣು ಅಗೆದು ಅದನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಹೋಗಿರುವುದು ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಭಕ್ತರಿಗೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವ್ಯಕ್ತಿಯಿಂದ ಶ್ರೀ ಕ್ಷೇತ್ರಕ್ಕೆ ಯಾವುದೇ ಅನಾಹುತ ಸಂಭವಿಸುವ ಸಾಧ್ಯತೆಯಿದೆ.ಅಲ್ಲದೆ ಈತನ ವಿರುದ್ಧ ಹಿಂದೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ಕೂಡಲೇ ವಿಚಾರಣೆಗೆ ಒಳಪಡಿಸುವಂತೆ ಒತ್ತಾಯಿಸಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

banner

ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

ವಶೀಕರಣ,ಮಂಕುಬೂದಿ ಎರಚುವ ಉದ್ದೇಶದಿಂದ ಪವಿತ್ರ ಕ್ಷೇತ್ರದ ಮಣ್ಣು ತೆಗದುಕೊಂಡು ಹೋಗಿರುವ ಸಂಶಯವನ್ನು ಭಕ್ತ ಸಮೂಹ ಹೊರಹಾಕಿದೆ.

You may also like

Leave a Comment