ಸುಬ್ರಹ್ಮಣ್ಯ: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದೆ. ಗ್ಯಾಸ್ ಪೂರೈಕೆ ವ್ಯತ್ಯಯದಿಂದ ಮಾ.11 ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿತ್ತು.

ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು. ಇದೀಗ ಗ್ಯಾಸ್ ಪೂರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ದೇವಸ್ಥಾನದಲ್ಲಿ ಕೇವಲ 3 ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದ್ದು, ನಂತರವೂ ಗ್ಯಾಸ್ ಪೂರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿರುವುದರಿಂದ, ಗ್ಯಾಸ್ ಪೂರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೂರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಾಗೂ ಪೂರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಊಟದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ. ಈ ಕುರಿತು ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ಬರುತ್ತದೆ ಎಂದು ವರದಿಯಾಗಿದೆ.

