Home latest ಸಾಲ ವಾಪಸ್ ಕೇಳಿದ್ದಕ್ಕೆ ಬ್ಯಾಟ್ ನಿಂದ ಬಾರಿಸಿ ಕೊಲೆ…!

ಸಾಲ ವಾಪಸ್ ಕೇಳಿದ್ದಕ್ಕೆ ಬ್ಯಾಟ್ ನಿಂದ ಬಾರಿಸಿ ಕೊಲೆ…!

Hindu neighbor gifts plot of land

Hindu neighbour gifts land to Muslim journalist

ಸಾಲ ವಾಪಸ್​ ಕೇಳಿದಕ್ಕೆ ಬ್ಯಾಟ್​ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮುನ್ನೆಕೊಳಲು ಸಮೀಪದ ಜೆಆರ್​ಎಂ ಪರ್ಲ್​ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ.

ಬೆಂಗಳೂರಿನ ಮಾರತ್ ಹಳ್ಳಿ ವೆಂಕಟೇಶಪ್ಪ (65) ಕೊಲೆಯಾದ ದುರ್ದೈವಿ.
ಮೃತ ವೆಂಕಟೇಶಪ್ಪ, ಆಪ್ತರಾದ ಶಿವಪ್ಪ ಅಲಿಯಾಸ್ ಮೇಷ್ಟ್ರು ಎನ್ನುವವರಿಗೆ ನಂಜುಂಡರೆಡ್ಡಿ ಹಾಗೂ ಪ್ರಕಾಶ್ ಅವರಿಂದ ಸಾಲ ಕೊಡಿಸಿದ್ದರು. ಸಾಲಕ್ಕೆ ಸಂಬಂಧಿಸಿದಂತೆ ಶಿವಪ್ಪ ನೀಡಿದ್ದ ಚೆಕ್​ ಬೌನ್ಸ್​ ಆಗಿತ್ತು. ಇದನ್ನು ಕೇಳಲೆಂದು ವೆಂಕಟೇಶಪ್ಪ ಸಾಲಗಾರರೊಂದಿಗೆ ಶಿವಪ್ಪನ ಅಪಾರ್ಟ್ಮೆಂಟ್ ಬಳಿ ಬಂದಿದ್ದರು.ಈ ವೇಳೆ ಕೋಪಗೊಂಡ ಶಿವಪ್ಪ ಬ್ಯಾಟ್​ನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಘಟನೆ ಸಂಬಂಧ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಹಿಡಿಯಲು ಬಲೆ ಬೀಸಿದ್ದಾರೆ.