

ಫೆ. 23 ರಂದು ಬೆಳಗ್ಗಿನ ಜಾವ ಗರ್ಭಿಣಿ ಲೀಲಾವತಿ ಮತ್ತು ಅವರ ಕುಟುಂಬದವರ ಅಭಿಲಾಷೆಯದೊಂದಿಗೆ ಮಂಗಳೂರಿನ ಲೇಡಿಗಷನ್ ಆಸ್ಪತ್ರೆಯಲ್ಲಿ ಹೆರಿಗೆ ಆಗಬೇಕೆಂದು ಹೇಳಿದಾಗ ವೈದ್ಯರ ಸೂಚನೆಯ ಮೇರೆಗೆ ಇಬ್ಬರು ಶುಶೂಶಕಿಯರ ಜೊತೆಗೆ ಆಸ್ಪತ್ರೆಯ ತುರ್ತು ವಾಹನದಲ್ಲಿ ಮಂಗಳೂರಿಗೆ ಕಳುಹಿಸಲಾಯಿತು.
ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಸಮೀಪಿಸುತ್ತಿದ್ದಂತೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದ್ದು ಮಾರ್ಗಮಧ್ಯದಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಆಂಬ್ಯುಲೆನ್ಸಲ್ಲಿ ಮಹಿಳೆಯ ಜೊತೆಗಿದ್ದ ಶುಶೂಕಿ ಕುಮುದ, ಸೌಮ್ಯ ಮತ್ತು ಚಾಲಕ ದಿನೇಶ್ ಗೌಡ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ಅತ್ಯಂತ ಕಡಿಮೆ ಸಮಯದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಜೊತೆಗಿದ್ದವರು ಮಾಹಿತಿ ನೀಡಿದ್ದಾರೆ.
