Home News ಮಂಗಳೂರು ನಗರದಲ್ಲಿ ನಡೆಯಿತು ಮತ್ತೊಂದು ಅಮಾನವೀಯ ಘಟನೆ | ನಾಯಿಯೊಂದನ್ನು ಗೋಣಿ ಚೀಲದಲ್ಲಿ ತುಂಬಿ ಬೀದಿಗೆ...

ಮಂಗಳೂರು ನಗರದಲ್ಲಿ ನಡೆಯಿತು ಮತ್ತೊಂದು ಅಮಾನವೀಯ ಘಟನೆ | ನಾಯಿಯೊಂದನ್ನು ಗೋಣಿ ಚೀಲದಲ್ಲಿ ತುಂಬಿ ಬೀದಿಗೆ ಎಸೆದ ದುಷ್ಕರ್ಮಿಗಳು

Hindu neighbor gifts plot of land

Hindu neighbour gifts land to Muslim journalist

ಮಂಗಳೂರು ನಗರದಲ್ಲಿ ಯಾರೋ ದುಷ್ಕರ್ಮಿಗಳು ನಾಯಿಯೊಂದನ್ನು ಗೋಣಿ ಚೀಲದಲ್ಲಿ ತುಂಬಿಸಿ ಬೀದಿಯಲ್ಲಿ ಬಿಸಾಕಿ ಅಮಾನವೀಯತೆ ಪ್ರದರ್ಶಿಸಿದ್ದಾರೆ.

ಮಂಗಳೂರು ನಗರದ ಹೊರವಲಯದ ಕುಡುಪು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇನ್ನು ನಾಯಿಯನ್ನು ಗಮನಿಸಿದ ವಾಮಂಜೂರು ನಿವಾಸಿ ಗ್ಲಾಟ್ಸನ್, ನಾಗೇಶ್ ಶೆಣೈ ಅವರು ತಕ್ಷಣ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಮಾನವೀಯ ಕೃತ್ಯದ ವಿರುದ್ಧ ನಿಂತ ಇಬ್ಬರು ಯುವಕರು ನಾಯಿಯನ್ನು ರಕ್ಷಿಸಿದ್ದಾರೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ದುಷ್ಕರ್ಮಿಗಳ ಕೃತ್ಯದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಈ ರೀತಿಯ ಕೃತ್ಯಗಳು ನಗರದಲ್ಲಿ ಮತ್ತೆ ಮತ್ತೆ ನಡೆಯುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಹಲವರು ಒತ್ತಾಯಿಸಿದ್ದಾರೆ.