Home latest ಮಂಗಳೂರಿನ ಜನತೆಗೆ ಖುಷಿ ಸುದ್ದಿ |ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ಇನ್ಮುಂದೆ ವಾರದಲ್ಲಿ ಆರು ದಿನ ಸಂಚಾರ

ಮಂಗಳೂರಿನ ಜನತೆಗೆ ಖುಷಿ ಸುದ್ದಿ |
ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ಇನ್ಮುಂದೆ ವಾರದಲ್ಲಿ ಆರು ದಿನ ಸಂಚಾರ

Hindu neighbor gifts plot of land

Hindu neighbour gifts land to Muslim journalist

ರೈಲು ಪ್ರಯಾಣಿಕರೇ ನಿಮಗೊಂದು ಗುಡ್ ನ್ಯೂಸ್. ಬೆಂಗಳೂರು ಮಂಗಳೂರು ಸಂಚರಿಸುತ್ತಿದ್ದ ಎಕ್ಸ್ ಪ್ರೆಸ್ ರೈಲು ಇನ್ನು ಮುಂದೆ ವಾರದಲ್ಲಿ 6 ದಿನ ಸಂಚರಿಸಲಿದೆ.

ನೈಋತ್ಯ ರೈಲ್ವೆಯಿಂದ ಜುಲೈ 27ರಂದು ರೈಲ್ವೆ ಬೋರ್ಡ್‌ಗೆ ಈ ಕುರಿಂತೆ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪತ್ರ ಬರೆಯಲಾಗಿತ್ತು. ಇದೇ ವೇಳೆ ವಾರದಲ್ಲಿ ಮೂರು ಬಾರಿ ಸಂಚರಿಸುತ್ತಿದ್ದ ನಂ.06547/48 ಕೆಎಸ್‌ಆರ್ ಬೆಂಗಳೂರು ಮಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಈ ರೈಲಿನೊಂದಿಗೆ ವಿಲೀನಗೊಳಿಸಲಾಗಿದೆ. ಬೆಂಗಳೂರು-ಮಂಗಳೂರು ನಡುವೆ ವಾರದಲ್ಲಿ ಮೂರು ದಿನ ಸಂಚರಿಸುತ್ತಿದ್ದ ನಂ.16585/86 ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ (ವಯಾ ಮೈಸೂರು) ರಾತ್ರಿ ರೈಲನ್ನು ವಾರದಲ್ಲಿ 6 ದಿನವೂ ಓಡಿಸಲು ಕೇಂದ್ರ ರೈಲ್ವೆ ಮಂಡಳಿ ಅನುಮತಿ ನೀಡಿದೆ.

ನಂ.16585/86 ಕೆಎಸ್‌ಆರ್ ಬೆಂಗಳೂರು- ಮಂಗಳೂರು ಎಕ್ಸ್‌ಪ್ರೆಸ್ ರೈಲಿನ ಟರ್ಮಿನಲ್ ಸದ್ಯ ಇರುವ ಕೆಎಸ್‌ಆರ್ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಸಿಟಿ ಜಂಕ್ಷನ್)ನಿಂದ ಎಸ್ಎಂವಿಬಿ (ಸರ್ ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೈಯಪ್ಪನ ಹಳ್ಳಿ)ಗೆ ವಿಸ್ತರಿಸಲಾಗಿದೆ. ಟರ್ಮಿನಲ್ ಬದಲಾವಣೆಯಾದರೂ ಬೆಂಗಳೂರು ಸಿಟಿ, ಕಂಟೋನ್ಮೆಂಟ್, ಸಿಟಿ ಮತ್ತು ಕೆಂಗೇರಿ ಸೇರಿದಂತೆ ಈ ಹಿಂದಿನ ಮಾರ್ಗದಲ್ಲಿಯೇ ಸಂಚರಿಸಲಿದೆ.

ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿರಂತರವಾಗಿ ಭೂ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಪ್ರಯಾಣಿಕರ ಬೇಡಿಕೆ ಮೇರೆಗೆ ಈ ವಿಶೇಷ ರೈಲನ್ನು ಆರಂಭಿಸಲಾಗಿತ್ತು.