Home » ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣ: ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ!

ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣ: ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ!

0 comments

ದಕ್ಷಿಣ ಕನ್ನಡ: ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಆಕೆಯ ಅಪಹರಣಕ್ಕೆ ಯತ್ನ ಮಾಡಿದಾಗ ಆ ರಸ್ತೆಯಲ್ಲಿ ಬರುತ್ತಿದ್ದ ಅಬ್ಬುಸಾಲಿಯವರನ್ನು ಕಂಡು ಸಿಕ್ಕಿಬೀಳುವ ಭಯದಿಂದ ಮೂವರು ಆರೋಪಿಗಳು ಕಾರು ಹತ್ತಿ ಸ್ಥಳದಲ್ಲಿ ಪರಾರಿಯಾಗಿದ್ದಾರೆ.

ಅಬ್ಬುಸಾಲಿ ಅವರು ಕೂಡಲೇ ಭಯಭೀತಗೊಂಡಿದ್ದ ಮತ್ತು ಚೂರಿ ಇರಿತಕ್ಕೊಳಗಾಗಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳದಲ್ಲಿ ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ವಿಷಯ ತಿಳಿದ ಕೂಡಲೇ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದು, ವಿದ್ಯಾರ್ಥಿನಿಯ ಹೇಳಿಕೆಯನ್ನು ದಾಖಲು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದು, ಹಲ್ಲೆಕೋರರು ಬಳಸಿದ ಇಕೋ ಕಾರಿನ ಪತ್ತೆಗೆ ಬಲೆ ಬೀಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎನ್ನುವ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.

You may also like