Home News ಮಂಗಳೂರು: ದೋಣಿ ದುರಂತ ,ಓರ್ವ ಕಣ್ಮರೆ,ನಾಲ್ವರ ರಕ್ಷಣೆ

ಮಂಗಳೂರು: ದೋಣಿ ದುರಂತ ,ಓರ್ವ ಕಣ್ಮರೆ,ನಾಲ್ವರ ರಕ್ಷಣೆ

Hindu neighbor gifts plot of land

Hindu neighbour gifts land to Muslim journalist

ಮಂಗಳೂರಿನ ಕಡಲಿನಲ್ಲಿ ಇಂದು ಬೆಳಗ್ಗೆ ದೋಣಿ ಅವಗಢ ಸಂಭವಿಸಿದ್ದು, ಓರ್ವ ಮೀನುಗಾರ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಪಣಂಬೂರು ಬೀಚ್ ಸಮೀಪವೇ ಈ ಅವಗಢ ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ. ಮೀನು ಹಿಡಿಯುವ ವೇಳೆ ಬೀಸಿದ ಗಾಳಿಗೆ ಗಿಲ್‌ನೆಟ್ ಬೋಟ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಝರ್ ಎಂಬವರ ಮಾಲೀಕತ್ವದ ಈ ದೋಣಿಯಲ್ಲಿ ಬೆಂಗ್ರೆಯ ಅಬ್ದುಲ್ ಅಜೀಜ್, ಇಮ್ಮಿಯಾಜ್, ಸಿನಾನ್, ಫೈರೋಜ್ ಹಾಗೂ ಶರೀಫ್ ಎಂಬವರಿದ್ದರು. ಇವರಲ್ಲಿ ಶರೀಫ್ ನೀರುಪಾಲಾಗಿದ್ದು ಅವರ ಶೋಧ ಕಾರ್ಯ ಮುಂದುವರೆದಿದೆ. ಉಳಿದ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ದೋಣಿಯನ್ನು ದಡಕ್ಕೆ ಎಳೆದು ತರಲಾಗಿದೆ ಎಂದು ತಿಳಿದುಬಂದಿದೆ.