Home » ಮರ್ದಾಳ ಸಮೀಪ ಬೈಕ್ ಹಾಗೂ ಕಾರು ನಡುವೆ ಅಪಘಾತ | ಬೈಕ್ ಸವಾರ ಬಂಟ್ರ ನಿವಾಸಿಗೆ ಗಂಭೀರ ಗಾಯ

ಮರ್ದಾಳ ಸಮೀಪ ಬೈಕ್ ಹಾಗೂ ಕಾರು ನಡುವೆ ಅಪಘಾತ | ಬೈಕ್ ಸವಾರ ಬಂಟ್ರ ನಿವಾಸಿಗೆ ಗಂಭೀರ ಗಾಯ

by ಹೊಸಕನ್ನಡ
0 comments

Hindu neighbor gifts plot of land

Hindu neighbour gifts land to Muslim journalist

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60) ಎಂದು ಗುರುತಿಸಲಾಗಿದೆ. ಮರ್ದಾಳ ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು,ಪರಿಶೀಲನೆ ನಡೆಸಿದ್ದಾರೆ.

You may also like

Leave a Comment