

Putturu : ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಪುತ್ತೂರು ನಗರದ ಮಧ್ಯೆ ಇರುವ ಮಹಿಳಾ ಕಾಲೇಜಲ್ಲಿ ಹೊಸ ಕಟ್ಟಡ ನಿರ್ಮಾಣವಾಗುತ್ತದೆ ಎಂದು ಹೇಳಿ ಪ್ರತಿವರ್ಷ ಹೇಳುತ್ತಾ ಇದ್ದಾರೆ. ಆದರೆ ಇನ್ನೂ ಕಟ್ಟಡ ಕಾಮಗಾರಿ ಆಗಿಲ್ಲ. ಹೀಗಾಗಿ ವಿಧ್ಯಾರ್ಥಿನಿಯರಿಗೆ ಸರಿಯಾದ ತರಗತಿ ಇಲ್ಲದೆ ಪಾಠ ಕೇಳಬೇಕಾದ ಪರಿಸ್ಥಿತಿ ಇದೆ. ಅಲ್ಲದೆ ಪಕ್ಕದಲ್ಲೆ ಇರುವ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಿಂದಾಗಿ ಕಾಲೇಜಿನ ಸುತ್ತಮುತ್ತ ವಾಸನೆ ಹರಡುತ್ತಿದೆ. ಇದರಿಂದಾಗಿ ತರಗತಿಯ ತುಂಬೆಲ್ಲಾ ಧೂಳು ತುಂಬಿದೆ, ಪ್ರತಿದಿನವೂ ವಿದ್ಯಾರ್ಥಿಗಳು ಆನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಅಲ್ಲದೆ ಈಗ ಇರುವ ತರಗತಿಗಳು ಇಂದೋ, ನಾಳೆಯೋ ಬೀಳುವ ಸ್ಥಿತಿಯಲ್ಲಿದೆ ಎಂದು ವಿಧ್ಯಾರ್ಥಿನಿಯರು ಆರೋಪಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ಶಾಸಕ ಅಶೋಕ್ ರೈ ಪ್ರತಿಭಟನೆ ಮಾಡಲು ಅವಕಾಶ ನೀಡಿದ ಕಾಲೇಜು ಉಪನ್ಯಾಸಕರ ಜೊತೆಗೆ ವಾಗ್ವಾದ ನಡೆಸಿದರು. ಉಪನ್ಯಾಸಕರನ್ನು ತರಾಟೆಗೆ ತೆಗೆದುಕೊಂಡ ಶಾಸಕ ಅಶೋಕ್ ಕುಮಾರ್ ರೈ , ಕಾಲೇಜಿನ ಸಮಸ್ಯೆಗಳನ್ನು ನನ್ನ ಗಮನಕ್ಕೆ ಯಾಕೆ ತಂದಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಸದ್ಯದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ.