Home » ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಭಾರಿ ಕಳ್ಳತನ – ಅರ್ಚಕರ ವಿರುದ್ಧವೇ ದೂರು ದಾಖಲು!!

ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಭಾರಿ ಕಳ್ಳತನ – ಅರ್ಚಕರ ವಿರುದ್ಧವೇ ದೂರು ದಾಖಲು!!

0 comments

ನಾಡಿನ ಐತಿಹಾಸಿಕ ಹಾಗೂ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ನಡೆದಿದ್ದು, ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವಿರುದ್ಧವೇ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ ಅವರು​ದೇವಸ್ಥಾನದ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಕಳ್ಳತನವಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ಹಿಂದೆ ಪ್ರಸಿದ್ಧ ವಜ್ರಾಂಗಿ ಆಭರಣ ಕಳ್ಳತನ ನಡೆದಿತ್ತು. ಈ ಬಳಿಕ, ಇಷ್ಟೊಂದು ದೊಡ್ಡ ಪ್ರಮಾಣದ ಕಳ್ಳತನದ ಶಂಕೆ ವ್ಯಕ್ತವಾಗಿರುವುದು ಭಕ್ತರಲ್ಲಿ ತೀವ್ರ ಆತಂಕ ಮೂಡಿಸಿದೆ.

ಕಳ್ಳತನ ಬಯಲಾಗಿದ್ದು ಹೇಗೆ?

​ದೇವಾಲಯದಲ್ಲಿ ಕಿಡಿಗೇಡಿಗಳು ಪದೇ ಪದೇ ಸಿಸಿ ಕ್ಯಾಮೆರಾಗಳನ್ನ ಕೆಡಿಸುತ್ತಿದ್ದರು. ಹೀಗಾಗಿ ಆಡಳಿತ ಮಂಡಳಿಯು ಅತ್ಯಂತ ಗೌಪ್ಯವಾಗಿ ರಹಸ್ಯ ಸಿಸಿ ಕ್ಯಾಮೆರಾಗಳನ್ನ ಅಳವಡಿಸಿತ್ತು. ಈ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿರುವ ವಿಚಾರ ಕೇವಲ ದೇವಾಲಯದ ಆಡಳಿತ ಸಿಬ್ಬಂದಿಗೆ ಮಾತ್ರ ತಿಳಿದಿತ್ತು. ​ಆದರೆ, 2026 ರ ಜನವರಿ 12 ರಂದು ಈ ರಹಸ್ಯ ಸಿಸಿ ಕ್ಯಾಮೆರಾವನ್ನು ಸಹ ಕಿಡಿಗೇಡಿಗಳು ಕೆಡಿಸಿದ್ದಾರೆ. ಆಗ ಕಳ್ಳತನದ ಉದ್ದೇಶದಿಂದಲೇ ದೇವಸ್ಥಾನದ ಒಳಗಿನ ಸಿಬ್ಬಂದಿ ಹಾಗೂ ಅರ್ಚಕರೇ ಈ ಕೃತ್ಯ ಎಸಗಿದ್ದಾರೆ ಎಂಬುದು ಬಯಲಾಗಿದೆ.

banner

​ದೇವಸ್ಥಾನದ ಇಒ ಶೀಲಾ ಅವರ ದೂರಿನನ್ವಯ ಪೊಲೀಸರು ಒಟ್ಟು 5 ಮಂದಿ ಪ್ರಮುಖರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ​ಶ್ರೀಧರ್ (ಪಾರುಪತ್ತೆಗಾರ), ​ನಾರಾಯಣ ಭಟ್ಟ (ಅರ್ಚಕ), ​ತಿರುವೆಂಗಡಚಾರ್ (ಪರಿಚಾರಕ), ​ಗಂಗಾಧರ್ ಮತ್ತು ಬಸವರಾಜ್ (ಕಾವಲುಗಾರರು) ವಿರುದ್ಧ ಕೇಸ್‌ ದಾಖಲಾಗಿದೆ. ಪೊಲೀಸರು ತನಿಖೆಯನ್ನ ತೀವ್ರಗೊಳಿಸಿದ್ದಾರೆ. 

You may also like