ಯೋಜನಾ ಮತ್ತು ಸಾಂಖಿಕ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (62) ಇಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಧನ ಹೊಂದಿದ್ದಾರೆ


ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗದ ಉಸ್ತುವಾರಿ ಸಚಿವರಾಗಿರುವ ಡಿ ಸುಧಾಕರ್ (65) ಇದೀಗ ನಿಧನರಾಗಿದ್ದಾರೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ ಸುಧಾಕರ್ ನಿಧನರಾಗಿದ್ದಾರೆ.
ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಡಿ.ಸುಧಾಕರ್ ವ್ಯಕ್ತಿ ಪರಿಚಯ:
• ಡಿ ಸುಧಾಕರ್ ಅವರು 28.03.1961 ರಲ್ಲಿ ಜನಿಸಿದರು
• 2004ರಲ್ಲಿ ಪ್ರಥಮ ಬಾರಿಗೆ ಚಳ್ಳಕೆರೆಯಿಂದ ಶಾಸಕರಾಗಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದರು.
• ಚಳ್ಳಕೆರೆ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕಾರಣ ಅವರು ಸಾಮಾನ್ಯ ಕ್ಷೇತ್ರವಾಗಿ ಬದಲಾದ ಹಿರಿಯೂರು ಕ್ಷೇತ್ರಕ್ಕೆ ವಲಸೆ ಬಂದರು.
* 2008ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿದರು.
• ಬಿ.ಎಸ್. ಯಡಿಯೂರಪ್ಪ ಸರ್ಕಾರಕ್ಕೆ ಬೆಂಬಲ ಘೋಷಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆದರು.
* 2013ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅವರು ಮತ್ತೆ ಆಯ್ಕೆಯಾದರು.
• 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸೋಲು ಅನುಭವಿಸಿದರು.
* 2023ರಲ್ಲಿ ಕಾಂಗ್ರೆಸ್ ನಿಂದ ಮರು ಆಯ್ಕೆಗೊಂಡು ಸಾಂಖಿಕ ಮತ್ತು ಯೋಜನಾ ಸಚಿವರಾದರು.
*ಚಳ್ಳಕೆರೆ, ಹಿರಿಯೂರು ಕ್ಷೇತ್ರದಲ್ಲಿ ಜೈನ ಸಮುದಾಯದ ಮತ 100 ದಾಟುವುದಿಲ್ಲ. ಆದರೆ ಇತರ ಸಮುದಾಯಗಳ ಪ್ರೀತಿ ಸಂಪಾದಿಸಿದ್ದ ಅವರು 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು

