Home » ಗಂಡನ ಮನೆಯಲ್ಲಿ ಹೆಂಡತಿ ಸಾವು ಪ್ರಕರಣ- ಮೃತ ನಿಶಾನ ಕುಟುಂಬಕ್ಕೆ 3 ಲಕ್ಷ ಪರಿಹಾರ ಕೊಡಿಸಿದ ಶಾಸಕ ಅಶೋಕ್ ರೈ!!

ಗಂಡನ ಮನೆಯಲ್ಲಿ ಹೆಂಡತಿ ಸಾವು ಪ್ರಕರಣ- ಮೃತ ನಿಶಾನ ಕುಟುಂಬಕ್ಕೆ 3 ಲಕ್ಷ ಪರಿಹಾರ ಕೊಡಿಸಿದ ಶಾಸಕ ಅಶೋಕ್ ರೈ!!

0 comments

ಜುಲೈ 18 ರಂದು ತನ್ನ ಗಂಡನ ಮನೆಯಲ್ಲಿ  ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 3 ಲಕ್ಷ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಅವರನ್ನು ಭೇಟಿಯಾಗಿದ್ದ ಶಾಸಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದರು.

ಅಲ್ಲದೆ ನಿಶಾನಾಳ ಕುಟುಂಬ ಆರ್ಥಿಕವಾಗಿ ತೀರಾ ಬಡವರಾಗಿದ್ದು ಮೃತಳಿಗೆ ಮೂರು ವರ್ಷ ಪ್ರಾಯದ ಮಗುವಿದ್ದು, ಕುಟುಂಬ ನೊಂದುಕೊಂಡಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಶಾಸಕರ ಮನವಿಯ ಮೇರೆಗೆ ಸಿ ಎಂ ಅವರು ಮೂರು ಲಕ್ಷ ಪರಿಹಾರ ಮೊತ್ತವನ್ನು ಮಂಜೂರುಗೊಳಿಸಿದ್ದು ಕೆಲವೇ ದಿನಗಳಲ್ಲಿ ಈ ಮೊತ್ತ ನಿಶಾನ ಕುಟುಂಬದ ಖಾತೆಗೆ ಜಮೆಯಾಗಲಿದೆ.

You may also like