Home News ಬೆಳ್ತಂಗಡಿ | ಮನೆ ದರೋಡೆ ಗ್ಯಾಂಗ್ ಅರೆಸ್ಟ್, 13 ಲಕ್ಷ ವಶ !

ಬೆಳ್ತಂಗಡಿ | ಮನೆ ದರೋಡೆ ಗ್ಯಾಂಗ್ ಅರೆಸ್ಟ್, 13 ಲಕ್ಷ ವಶ !

Hindu neighbor gifts plot of land

Hindu neighbour gifts land to Muslim journalist

ಕಳೆದ ಅಕ್ಟೋಬರ್ 31 ರಂದು ಬೆಳ್ತಂಗಡಿಯಲ್ಲಿ ಕಳವಾದ ದೊಡ್ಡ ಮೊತ್ತದ ಮನೆ ಕಳ್ಳರನ್ನು ಪತ್ತೆ ಹಚ್ಚಲಾಗಿದೆ. ಎಲ್ಲಾ ಆರೋಪಿಗಳೂ ಈಗ ಪೊಲೀಸ್ ಬಂಧನದಲ್ಲಿ ಬಿದ್ದಿದ್ದಾರೆ.

ಬೆಳ್ತಂಗಡಿ ತಾಲೂಕು, ಇಂದಬೆಟ್ಟು ಗ್ರಾಮ ಮಹಮ್ಮದ್ ಎಂಬವರು ದಿನಾಂಕ : 31-10-2021 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾರೋ ಕಳ್ಳರು ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ 13 ಪವನಿನ ಚಿನ್ನದ ನೆಕ್ಲೀಸ್ 01, ಒಂದು ಪವನಿನ ಚಿನ್ನದ ಚೈನ್ 01 , ಒಂದು ಪವನಿನ ಚಿನ್ನದ ಸಣ್ಣ ಚೈನ್ – 01 , ಒಂದೂವರೆ ವವನಿನ ಚಿನ್ನದ ಮಕ್ಕಳ ಚೈನ್ – 02 , ತಲಾ ಒಂದು ಒಂದು ಪವನಿನ ಚಿನ್ನದ ಕಾಯಿನ್ಸ್ – 04 , ತಲಾ ನಾಲ್ಕು ಪವನಿನ ಚಿನ್ನದ ಬಿಸ್ಕೆಟ್ – 04 – ಎರಡು ಪವನಿನ ಚಿನ್ನದ ಗಟ್ಟಿ – 01 ಅರ್ಧ ಪವನಿನ ಚಿನ್ನದ ಬ್ರಾಸ್ ಲೈಟ್ – 01 : ಅರ್ಧ ಪವನಿನ ಚಿನ್ನದ ತುಂಡಾದ ಬಳೆ ಹಾಗೂ ಪೆಂಡೆಂಟ್ – 01, ಅರ್ಧ ಪವನಿನ ಚಿನ್ನದ ಮಗುವಿನ ಕಿವಿ ಓಲೆ -01 ಜೊತೆ , ಮುಂತಾದ ಸುಮಾರು 12,05,200 ರಷ್ಟು ದೊಡ್ಡ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವು ಆಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳಾದ ನಾವೂರು ಗ್ರಾಮದ ನಿರಿಂದಿ ಮನೆಯ ಮಹಮ್ಮದ್ ಸ್ವಾಲಿ, ಲಾಯಿಲಾ ಗ್ರಾಮದ ಕುಂಟಿನಿ ಮನೆ ಯಾಹ್ಯಾ, ಬಿ.ಹೆಚ್ ನೌಫಲ್, ನಾವೂರು ಎಂಬವರುಗಳನ್ನು ಹೆಡೆ ಮುರಿ ಕಟ್ಟಲಾಗಿದೆ. ಮತ್ತು ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ ಕೆಎ , 21 ಎಂ 8376 ನೇ ಅಲ್ಲೋ ಕಾರು , ಪಲ್ಸರ್ ಎನ್ ಎಸ್ ಮೋಟಾರು ಸೈಕಲ್, ನಾಲ್ಕು ಮೊಬೈಲ್ ಹ್ಯಾಂಡ್ ಸೆಟ್ ಇವುಗಳ ಒಟ್ಟು ಮೌಲ್ಯ 1,69,500 ರೂಗಳು , ಹಾಗೂ ಕಳವಾದ 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣಗಳು, ನಗದು 1230 ರೂ ಗಳನ್ನು ಸ್ವಾಧೀನಪಡಿಸಿಕೊಂಡು ಸ್ವಾಧೀನ ಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 13,75,930 ರೂಪಾಯಿ ಆಗಿದ್ದು , ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸದ್ರಿ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಾನ್ಯ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಸೋನವನ ಋಷಿಕೇಶ್ ಭಗವಾನ್ ಐ.ಪಿ.ಎಸ್ , ಶ್ರೀ ಶಿವಕುಮಾರ್ ಗುಣಾರೆ , ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರುಗಳ ನಿರ್ದೇಶನದಂತೆ ದೊಡ್ಡ ತಂಡ ಕಟ್ಟಿ ಫೀಲ್ಡ್ ಗೆ ಇಳಿದಿದ್ದರು. ಆ ತಂಡದಲ್ಲಿ ಶ್ರೀ ಶಿವಾಂಶು ರಜಪೂತ್ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರವರ ಸೂಚನೆಯಂತೆ ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ಶಿವಕುಮಾರ ಬಿ , ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ಶ್ರೀ ನಂದ ಕುಮಾರ್ , ಪ್ರೊ.ಪಿಎಸ್‌ಐ ಮೂರ್ತಿ , ಎಎಸೈ , ದೇವಪ್ಪ ಎಂಕ , ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್ , ವೃಷಭ , ಪ್ರಮೋದ್ ನಾಯ್ಕ , ಇಬ್ರಾಹಿಂ ಗರ್ಡಾಡಿ , ಲತೀಫ್ , ವಿಜಯ ಕುಮಾರ್ ರೈ , ವೆಂಕಟೇಶ್ , ಬಸವರಾಜ್ , ಚರಣ್ , ಅವಿನಾಶ್ , ವಾಹನ ಚಾಲಕರಾದ ಮಹಮ್ಮದ್ ಆಸೀಫ್ , ಸತೀಶ್ , ತಾಂತ್ರಿಕ ಸಿಬ್ಬಂದಿಗಳಾದ ದಿವಾಕರ, ಸಂಪತ್ ಕುಮಾರ್ ಗಳ ಸಹಾಯದಿಂದ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ.