ಕರ್ನಾಟಕಕ್ಕೆ ಮುಂಗಾರು ಮಳೆಯ ಅಧಿಕೃತ ಪ್ರವೇಶವಾಗಿದ್ದು, ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅರೇಂಜ್ ಅಲರ್ಟ್ ನೀಡಿದೆ.


ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಹೆಚ್ಚಿರಲಿದ್ದು, ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಪ್ರದೇಶಗಳಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಅಲ್ಲದೆ ಸಿಡಿಲು ಮತ್ತು ತೀವ್ರ ಗಾಳಿಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

