ರಾಜ್ಯದಲ್ಲಿ ಮುಂಗಾರಿನ ಕೊರತೆ ಎದ್ದು ಕಾಣುತ್ತಿರುವ ನಡುವೆಯೇ ಇದೀಗ, ರಾಜ್ಯಕ್ಕೆ ಮುಂಗಾರು ಮರಳಿ ಬಂದಿದೆ. 28 ರ ವರೆಗೂ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಹವಮಾನ ಇಲಾಖೆಯು 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.


ಜೂನ್ 23ರಂದು ನಾಳೆ ಮಂಗಳವಾರ ರಾಜ್ಯದ 13 ಜಿಲ್ಲೆಗಳಲ್ಲಿ ಸಾಧರಣದಿಂದ ಭಾರೀ ಮಳೆ ಆಗಲಿದೆ. ಕರಾವಳಿಯ ಉಡುಪಿ,ದಕ್ಷಿಣ ಕನ್ನಡ ಹಾಗೂ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಕನಿಷ್ಠ 65 ಮಿಲಿ ಮೀಟರ್ ನಿಂದ 115 ಮಿಲಿ ಮೀಟರ್ ವರೆಗೆ ಭಾರೀ ಮಳೆ ಆಗಲಿದ್ದು, ಒಂದು ದಿನ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಒಳನಾಡು ಹಾಗೂ ಮಲೆನಾಡಿನಲ್ಲಿ ಜೂನ್ 23ರಂದು ಒಂದು ದಿನ ಮಾತ್ರವೇ ಧಾರಾಕಾರ ಮಳೆ ಆಲಿದ್ದು, ಉಳಿದೆಡೆ ಒಣಹವೆ, ತೀವ್ರ ಬಿಸಿಲಿನ ಶಾಖ ಮುಂದುವರಿಯಲಿದೆ. ಹಾವೇರಿ, ಕೊಪ್ಪಳ, ಗದಗ, ರಾಯಚೂರು, ಕಲಬುರಗಿ ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಬೇಸಿಗೆ ಅನುಭವ ಮುಂದುವರಿಯಲಿದೆ. ಇತ್ತ ಕರ್ನಾಟಕ ಕರಾವಳಿಯಲ್ಲಿ ಜೂನ್ 28ರವರೆಗೆ ಭರ್ಜರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ಮುನ್ನೆಚ್ಚರಿಕೆ ಕೊಟ್ಟಿದ್ದಾರೆ.
ಒಳನಾಡು ಹಾಗೂ ಮಲೆನಾಡಿನಲ್ಲಿ ಜೂನ್ 23ರಂದು ಒಂದು ದಿನ ಮಾತ್ರವೇ ಧಾರಾಕಾರ ಮಳೆ ಆಲಿದ್ದು, ಉಳಿದೆಡೆ ಒಣಹವೆ, ತೀವ್ರ ಬಿಸಿಲಿನ ಶಾಖ ಮುಂದುವರಿಯಲಿದೆ. ಹಾವೇರಿ, ಕೊಪ್ಪಳ, ಗದಗ, ರಾಯಚೂರು, ಕಲಬುರಗಿ ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಬೇಸಿಗೆ ಅನುಭವ ಮುಂದುವರಿಯಲಿದೆ. ಇತ್ತ ಕರ್ನಾಟಕ ಕರಾವಳಿಯಲ್ಲಿ ಜೂನ್ 28ರವರೆಗೆ ಭರ್ಜರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ಮುನ್ನೆಚ್ಚರಿಕೆ ಕೊಟ್ಟಿದ್ದಾರೆ.

