Home » ಮೂಡುಬಿದಿರೆ ಇನ್ಸ್‌ಪೆಕ್ಟರ್‌ ಸಂದೇಶ್‌ ಕೇಸ್‌: ಸಿಐಡಿ ತನಿಖೆಗೆ ಹಸ್ತಾಂತರ-ಸಚಿವ ಪರಮೇಶ್ವರ

ಮೂಡುಬಿದಿರೆ ಇನ್ಸ್‌ಪೆಕ್ಟರ್‌ ಸಂದೇಶ್‌ ಕೇಸ್‌: ಸಿಐಡಿ ತನಿಖೆಗೆ ಹಸ್ತಾಂತರ-ಸಚಿವ ಪರಮೇಶ್ವರ

0 comments

ಬೆಂಗಳೂರು: ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಂದೇಶ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತ ಮಹಿಳೆಯರು ಇಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ಜೊತೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ತಮ್ಮ ನೋವನ್ನು ಹೇಳಿಕೊಂಡಿದ್ದು, ಸಂತ್ರಸ್ತೆಯರ ಅಹವಾಲು ಆಲಿಸಿದ ಗೃಹ ಸಚಿವರು, ಪ್ರಕರಣ ಗಾಂಭೀರ್ಯವನ್ನು ಪರಿಗಣಿಸಿ ತಕ್ಷಣವೇ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಆದೇಶಿಸಿದ್ದಾರೆ.

ಗೃಹ ಸಚಿವರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಸಂತ್ರಸ್ತೆಯರು ತಮಗಾದ ಅನ್ಯಾಯ ಮತ್ತು ಘಟನೆಯ ಪೂರ್ಣ ಮಾಹಿತಿಯನ್ನು ಸಾಕ್ಷಿ ಸಮೇತ ಹೇಳಿದ್ದಾರೆ. ಮೂಡುಬಿದಿರೆ ಘಟನೆಯ ಕುರಿತು ಇಂದು ಕೆಲವು ಸಂತ್ರಸ್ತೆಯರು ನನ್ನನ್ನು ಭೇಟಿ ಮಾಡಿದರು. ಅವರು ನೀಡಿದ ಮಾಹಿತಿ ಮತ್ತು ಘಟನೆಗಳ ಆಧಾರದ ಮೇಲೆ ಸತ್ಯಾಸತ್ಯತೆ ಹೊರಬರಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖಗೆ ವಹಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಹೇಳಿದ್ದಾರೆ.

You may also like