Home News ಮೈಸೂರು ಭೀಕರ ರಸ್ತೆ ಅಪಘಾತ: ಸುಳ್ಯದ ಯುವಕ ಸಾವು

ಮೈಸೂರು ಭೀಕರ ರಸ್ತೆ ಅಪಘಾತ: ಸುಳ್ಯದ ಯುವಕ ಸಾವು

Hindu neighbor gifts plot of land

Hindu neighbour gifts land to Muslim journalist

ಸುಳ್ಯ: ಮೈಸೂರಿನ ಮಳವಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ದೀಕ್ಷಿತ್‌ (25) ಸಾವಿಗೀಡಾಗಿರುವ ಕುರಿತು ವರದಿಯಾಗಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್‌ ನಿವಾಸಿ ಶೇಷಪ್ಪ ನಾಯ್ಕ ಅವರ ಪುತ್ರ ದೀಕ್ಷಿತ್‌. ಇವರು ಬೆಂಗಳೂರಿನ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.

ಕಂದಡ್ಕದ ಕಲ್ಟಾರ್‌ಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಮೈಸೂರು ಸಮೀಪದ ಮಳವಳ್ಳಿಯಲ್ಲಿ ದುರ್ಘಘಟನೆ ನಡೆದಿದೆ. ಅಪರಿಚಿತ ವಾಹನವೊಂದು ಬೈಕ್‌ಗೆ ಅತಿವೇಗದಿಂದ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.

ದೀಕ್ಷಿತ್‌ಗೆ ಗಂಭೀರವಾಗಿ ಗಾಯವಾಗಿದ್ದು, ಆತನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದು, ಆಸ್ಪತ್ರೆಗೆ ತಲುಪುವ ದಾರಿ ಮಧ್ಯೆಯೇ ದೀಕ್ಷಿತ್‌ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮೈಸೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಅಪರಿಚಿತ ವಾಹನ ಮತ್ತು ಚಾಲಕನಿಗಾಗಿ ಹುಡುಕಾಟ ನಡೆದಿದೆ.