ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಕುರಿತು ಅತ್ಯಂತ ಸೌಹಾರ್ದಯುತ ಮತ್ತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ತಮಗೆ ಶುಭ ಹಾರೈಸಿದ್ದು, ಸೌಜನ್ಯದ ದೃಷ್ಟಿಯಿಂದ ತಾವು ಶೀಘ್ರದಲ್ಲಿಯೇ ಅವರನ್ನು ಭೇಟಿ ಮಾಡುವುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ.


ಪ್ರಧಾನಿ ಮೋದಿ ಅವರು ಇತ್ತೀಚೆಗೆ ಶುಭ ಹಾರೈಕೆಯನ್ನು ಸಿಎಂ ಡಿಕೆಶಿ ಅವರಿಗೆ ನೀಡಿದ್ದರು. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಸೂರತ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು. ಕಾಂಗ್ರೆಸ್ ಆಡಳಿತದ ಕುರಿತು ಜನರಲ್ಲಿ ಅಸಮಾಧಾನವಿರುವ ಕಾರಣಕ್ಕೆ ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಬೇಕಾಗಿ ಬಂತು ಎಂದು ಮೋದಿ ಟೀಕೆ ಮಾಡಿದ್ದರು.
ಆದರೆ ಈ ಟೀಕೆಗಳ ನಡುವೆಯೂ ಪ್ರಧಾನಿ ಮೋದಿ ಅವರು ತಮಗೆ ಅಭಿನಂದನೆ ಮತ್ತು ಶುಭ ಹಾರೈಕೆಯ ಸಂದೇಶ ಕಳುಹಿಸಿರುವುದನ್ನು ಮುಖ್ಯಮಂತ್ರಿ ಬಹಿರಂಗ ಪಡಿಸಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಶುಭ ಕೋರಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಒಬ್ಬ ಮುಖ್ಯಮಂತ್ರಿಯಾಗಿ ಸೌಜನ್ಯದ ದೃಷ್ಟಿಯಿಂದ ನಾನು ದೆಹಲಿಗೆ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡುತ್ತೇನೆ” ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
