

ನವದೆಹಲಿ: ಬ್ಯಾಂಕ್ಗಳ ಖಾಸಗೀಕರಣ ಮತ್ತು ಕಾರ್ಮಿಕ ಸಂಹಿತೆಯನ್ನು ವಿರೋಧ ಮಾಡಿ ಫೆಬ್ರವರಿ 12 ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ನಡೆಯಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿ ದೇಶದ ಪ್ರಮುಖ ಬ್ಯಾಂಕ್ಗಳು ಫೆ.12 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದೆ. ಸೇವೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಯಾವುದೇ ತುರ್ತು ಕೆಲಸವನ್ನು ಮುಂಚಿತವಾಗಿ ಪೂರ್ಣಗೊಳಿಸಲು ಬ್ಯಾಂಕುಗಳ ತಮ್ಮ ಗ್ರಾಹಕರಿಗೆ ಸೂಚನೆ ನೀಡಿದೆ.
ಹಿಂದೂ ಮಜ್ದೂರ್ ಕಿಸಾನ್ ಪಂಚಾಯತ್ನ ಪ್ರಾಂತೀಯ ನಾಯಕ ಮೊಹಮ್ಮದ್ ಹಸ್ನೈನ್ ಅನ್ಸಾರಿ, ಉತ್ತರ ಪ್ರದೇಶ ಕಿಸಾನ್ನ ಇಂದ್ರದೇವ್ ಪಾಲ್ ಅವರು 12ರಂದು ಜಿಲ್ಲೆಯಲ್ಲಿ ಮತ್ತು ಇಡೀ ಭಾರತದಲ್ಲಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಸಮಯದಲ್ಲಿ ಬ್ಯಾಂಕ್ಗಳು, ಭಾರತೀಯ ಜೀವ ವಿಮಾ ನಿಗಮ, ಅಂಚೆ ಕಚೇರಿಗಳು ಮುಚ್ಚಲ್ಪಡುತ್ತವೆ. ಮಂಗಳವಾರ ಬ್ಯಾಂಕ್ ಹಾಗೂ ಎಲ್ಐಸಿ ಉದ್ಯೋಗಿಗಳನ್ನು ಸಂಪರ್ಕಿಸಲಾಗಿದೆ ಎಂದು ಹೇಳಿದ್ದಾರೆ.
ಶಾಖೆಗಳು ತೆರೆದಿರಬಹುದು ಆದರೆ ನಗದು ವಹಿವಾಟು ಮತ್ತು ಚೆಕ್ ಕ್ಲಿಯರಿಂಗ್ ಕೆಲಸದಲ್ಲಿ ವಿಳಂಬವಾಗಬಹುದು. ಆದಾಗ್ಯೂ, ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಲ್ಲಿ ಯಾವುದೇ ಅಡ್ಡಿ ಉಂಟಾಗುವುದಿಲ್ಲ.
ವಾರದಲ್ಲಿ ಐದು ದಿನ ಕೆಲಸಕ್ಕೆ ಒತ್ತಾಯ ಮಾಡಿ ಜನವರಿ 27 ರಂದು ಬ್ಯಾಂಕ್ಗಳು ಒಂದು ದಿನ ಮುಷ್ಕರ ಮಾಡಿದ್ದವು. ಕಳೆದ ವರ್ಷ ಸರಕಾರ ಹೊರಡಿಸಿದ ಅಧಿಸೂಚನೆಯಲ್ಲಿ ನಾಲ್ಕು ಹೊಸ ಕಾರ್ಮಿಕ ಕಾನೂನುಗಳನ್ನು ವಿರೋಧಿಸಲು ಫೆ.12 ರಂದು 10 ಕೇಂದ್ರ ಕಾರ್ಮಿಕ ಸಂಘಗಳು ಕರೆದ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.













